‘ದಾದಾ ಸಾಹೇಬ್​ ಫಾಲ್ಕೆ ಭರವಸೆ ನಟ’ ಪ್ರಶಸ್ತಿ ಗೆ ಭಾಜಕರಾದ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್​ -Vishwanews24

ಮುಂಬೈ: ನಟ ಕಿಚ್ಚ ಸುದೀಪ್​ ದಾದಾ ಸಾಹೇಬ್​ ಫಾಲ್ಕೆ ಭರವಸೆ ನಟ ಪ್ರಶಸ್ತಿ ಸ್ವೀಕರಿಸಿದ್ದಾರೆ. ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಕಿಚ್ಚ ಈ ಗೌರವ ಸ್ವೀಕರಿಸಿದರು.

ಕಳೆದ ವರ್ಷ ತೆರೆಗೆ ಬಂದಿದ್ದ ಸಲ್ಮಾನ್​ ಖಾನ್​ ಅಭಿನಯದ ‘ದಬಾಂಗ್​ 3’ ಚಿತ್ರದಲ್ಲಿ ಸುದೀಪ್​ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾದ ನಟನೆಗಾಗಿ ಸುದೀಪ್​ಗೆ ದಾದಾ ಸಾಹೇಬ್​ ಫಾಲ್ಕೆ ಭರವಸೆ ನಟ ಪ್ರಶಸ್ತಿ ದೊರೆತಿದೆ.

ಈ ಬಗ್ಗೆ ಟ್ವೀಟ್​ ಮಾಡಿ ಧನ್ಯವಾದ ಹೇಳಿರುವ ಸುದೀಪ್​, “ಗೆಳೆಯರಿಗೆ, ಮಾಧ್ಯಮ ಮಿತ್ರರಿಗೆ, ಸಹೋದ್ಯೋಗಿಗಳಿಗೆ, ಸಹ ಕಲಾವಿದರಿಗೆ, ತಂತ್ರಜ್ಞರಿಗೆ, ನನ್ನ ಕುಟುಂಬ, ನನ್ನ ತಂಡಕ್ಕೆ ಧನ್ಯವಾದಗಳು. ಪರಿಪೂರ್ಣವಾಗಲು ನೀವು ಕಾರಣ. ಉತ್ತಮವಾಗಿ ನಟಿಸಲು ನೀವು ಕಾರಣ,” ಎಂದು ಸುದೀಪ್​ ಧನ್ಯವಾದ ಹೇಳಿದ್ದಾರೆ.

‘ದಬಾಂಗ್ 3’ ಚಿತ್ರದಲ್ಲಿ ಸುದೀಪ್ ನೆಗೆಟಿವ್​ ಪಾತ್ರ ಮಾಡಿದ್ದರು. ಸಲ್ಮಾನ್ ಖಾನ್ ನಟನೆಯ ಈ ಚಿತ್ರಕ್ಕೆ ಪ್ರಭುದೇವ ಆ್ಯಕ್ಷನ್​ ಕಟ್​ ಹೇಳಿದ್ದರು. ಈ ಚಿತ್ರದ ನಟನೆಗೆ ಸುದೀಪ್​ಗೆ ಈ ಪ್ರಶಸ್ತಿ ಜನವರಿ ತಿಂಗಳಲ್ಲಿ ಘೋಷಣೆ ಆಗಿತ್ತು. ಫೆ.20ರಂದು ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಸುದೀಪ್​ ಪ್ರಶಸ್ತಿ ಸ್ವೀಕರಿಸಿದ್ದಾರೆ.

Vishwa News 24

Recent Posts

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ -vishwanews24

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…

5 minutes ago

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ -vishwanews24

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…

19 minutes ago

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

14 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

24 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

24 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

1 day ago