‘ದಾದಾ ಸಾಹೇಬ್​ ಫಾಲ್ಕೆ ಭರವಸೆ ನಟ’ ಪ್ರಶಸ್ತಿ ಗೆ ಭಾಜಕರಾದ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್​ -Vishwanews24

ಮುಂಬೈ: ನಟ ಕಿಚ್ಚ ಸುದೀಪ್​ ದಾದಾ ಸಾಹೇಬ್​ ಫಾಲ್ಕೆ ಭರವಸೆ ನಟ ಪ್ರಶಸ್ತಿ ಸ್ವೀಕರಿಸಿದ್ದಾರೆ. ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಕಿಚ್ಚ ಈ ಗೌರವ ಸ್ವೀಕರಿಸಿದರು.

ಕಳೆದ ವರ್ಷ ತೆರೆಗೆ ಬಂದಿದ್ದ ಸಲ್ಮಾನ್​ ಖಾನ್​ ಅಭಿನಯದ ‘ದಬಾಂಗ್​ 3’ ಚಿತ್ರದಲ್ಲಿ ಸುದೀಪ್​ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾದ ನಟನೆಗಾಗಿ ಸುದೀಪ್​ಗೆ ದಾದಾ ಸಾಹೇಬ್​ ಫಾಲ್ಕೆ ಭರವಸೆ ನಟ ಪ್ರಶಸ್ತಿ ದೊರೆತಿದೆ.

ಈ ಬಗ್ಗೆ ಟ್ವೀಟ್​ ಮಾಡಿ ಧನ್ಯವಾದ ಹೇಳಿರುವ ಸುದೀಪ್​, “ಗೆಳೆಯರಿಗೆ, ಮಾಧ್ಯಮ ಮಿತ್ರರಿಗೆ, ಸಹೋದ್ಯೋಗಿಗಳಿಗೆ, ಸಹ ಕಲಾವಿದರಿಗೆ, ತಂತ್ರಜ್ಞರಿಗೆ, ನನ್ನ ಕುಟುಂಬ, ನನ್ನ ತಂಡಕ್ಕೆ ಧನ್ಯವಾದಗಳು. ಪರಿಪೂರ್ಣವಾಗಲು ನೀವು ಕಾರಣ. ಉತ್ತಮವಾಗಿ ನಟಿಸಲು ನೀವು ಕಾರಣ,” ಎಂದು ಸುದೀಪ್​ ಧನ್ಯವಾದ ಹೇಳಿದ್ದಾರೆ.

‘ದಬಾಂಗ್ 3’ ಚಿತ್ರದಲ್ಲಿ ಸುದೀಪ್ ನೆಗೆಟಿವ್​ ಪಾತ್ರ ಮಾಡಿದ್ದರು. ಸಲ್ಮಾನ್ ಖಾನ್ ನಟನೆಯ ಈ ಚಿತ್ರಕ್ಕೆ ಪ್ರಭುದೇವ ಆ್ಯಕ್ಷನ್​ ಕಟ್​ ಹೇಳಿದ್ದರು. ಈ ಚಿತ್ರದ ನಟನೆಗೆ ಸುದೀಪ್​ಗೆ ಈ ಪ್ರಶಸ್ತಿ ಜನವರಿ ತಿಂಗಳಲ್ಲಿ ಘೋಷಣೆ ಆಗಿತ್ತು. ಫೆ.20ರಂದು ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಸುದೀಪ್​ ಪ್ರಶಸ್ತಿ ಸ್ವೀಕರಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

16 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago