Featured

ದಿಗಂತ್ ನಾಪತ್ತೆ ಪ್ರಕರಣ : ಪ್ರಚೋದನಾಕಾರಿ ಭಾಷಣ ಮಾಡಿದ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ: ರಮಾನಾಥ ರೈ – vishwanews24

ದಿಗಂತ್ ನಾಪತ್ತೆ ಪ್ರಕರಣ : ಪ್ರಚೋದನಾಕಾರಿ ಭಾಷಣ ಮಾಡಿದ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ: ರಮಾನಾಥ ರೈ

ಮಂಗಳೂರು: ಫರಂಗಿಪೇಟೆಯ ಯುವಕ ದಿಗಂತ್ ನಾಪತ್ತೆ ಪ್ರಕರಣ ಜಿಲ್ಲೆಯ ಪೊಲೀಸರ ಕಾರ್ಯಾಚರಣೆ ಮೂಲಕ ಸುಖಾಂತ್ಯ ಕಂಡಿದೆ. ಆದರೆ ನಾಪತ್ತೆ ಸಂದರ್ಭದಲ್ಲಿ ಯಾವುದೇ ಸುಳಿವಿಲ್ಲದಾಗ, ಸುಳ್ಳಿನ ಮೂಲಕ ಸಮಾಜದಲ್ಲಿ ದ್ವೇಷ ಹುಟ್ಟಿಸುವ ರೀತಿಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದ ಪಕ್ಷದ ಹಾಗೂ ಸಂಘಟನೆಗಳ ಪ್ರಮುಖರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಆಗ್ರಹಿಸಿದ್ದಾರೆ.

ಮಲ್ಲಿಕಟ್ಟೆಯ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಮತೀಯ ಸೂಕ್ಷ್ಮ ಎಂಬ ಹಣೆಪಟ್ಟಿ ಇದೆ. ಇಂತಹ ಸಂದರ್ಭದಲ್ಲಿ ದಿಗಂತ್ ನಾಪತ್ತೆ ಪ್ರಕರಣವನ್ನು ಮತೀಯವಾದಿ ಸಂಘಟನೆಗಳು ಜನರಲ್ಲಿ ತಪ್ಪು ಭಾವನೆ ಮೂಡಿಸಿ ಸಮಾದಲ್ಲಿ ಸಾಮರಸ್ಯ ಕದಕುವ ಪ್ರಯತ್ನ ಮಾಡಿವೆ.

ಸಮಾಜವು ಕೂಡಾ ಇಂತಹ ಪ್ರಕರಣಗಳ ಸಂದರ್ಭ ಮತೀಯವಾದಿಗಳಿಂದ ಕೋಮು ಸಾಮರಸ್ಯಕ್ಕೆ ಹಾನಿಯುಂಟುಮಾಡುವ ಕೃತ್ಯಗಳ ಬಗ್ಗೆ ಅರ್ಥ ಮಾಡಿಕೊಳ್ಳುವುದು ಅಗತ್ಯ. ಜಿಲ್ಲೆಯಲ್ಲಿ ಶರತ್ ಮಡಿವಾಳ ಹತ್ಯೆಯನ್ನೂ ಚುನಾವಣಾ ವಿಚಾರವಾಗಿಸಿ ಅಪಪ್ರಚಾರ ಮಾಡುವ ಮೂಲಕ ಮತೀಯವಾದಿಗಳು ನಮ್ಮ ಸೋಲಿಗೆ ಕಾರಣವಾಗಿದ್ದಾರೆ. ರಾಜಕೀಯದಲ್ಲಿ ಪ್ರಾಮಾಣಿಕವಾಗಿ ಸೋಲಿಸಲು ಸಾಧ್ಯವಿಲ್ಲ ಎಂದು ಅರಿತು ಈ ರೀತಿಯ ಸುಳ್ಳು ಪ್ರಚಾರಗಳನ್ನು ಬಿಜೆಪಿ ನಡೆಸುತ್ತಾ ಬಂದಿರುವುದನ್ನು ನಾನು ನೋವಿನಿಂದ ನೆನಪಿಸಲು ಬಯಸುತ್ತೇನೆ ಎಂದರು.

ಮತೀಯ ಶಕ್ತಿಗಳಿಗೆ ಜಿಲ್ಲೆಯಲ್ಲಿ ಶಾಂತಿ, ಸಾಮರಸ್ಯ, ಅಭಿವೃದ್ಧಿಯಾಗುವುದು ಮುಖ್ಯವಲ್ಲ. ಆದರೆ ಹಿಂಸೆಗೆ ಅಹಿಂಸೆ, ದ್ವೇಷಕ್ಕೆ ಪ್ರೀತಿಯೇ ಉತ್ತರ ಎಂದು ತಿಳಿದವರು ನಾವು ಎಂದವರು ಹೇಳಿದರು.

ಗೋಷ್ಟಿಯಲ್ಲಿ ಮಾಜಿ ಮೇಯರ್ ಶಶಿಧರ ಹೆಗ್ಡೆ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಸಾಲಿಯಾನ್, ಮಾಜಿ ಕಾರ್ಪೊರೇಟರ್‌ಗಳಾದ ಅಬ್ದುಲ್ ಲತೀಫ್, ಅಶೋಕ್ ಡಿ.ಕೆ., ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿಕಾಸ್ ಶೆಟ್ಟಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್, ಮುಖಂಡರಾದ ಸುಧೀರ್ ಟಿ.ಕೆ., ಶಬ್ಬೀರ್, ಅಬ್ಬಾಸ್ ಅಲಿ, ಅಪ್ಪಿ, ಗಣೇಶ್ ಪೂಜಾರಿ, ನಝೀರ್ ಬಜಾಲ್ ಮೊದಲಾದವರು ಉಪಸ್ಥಿತರಿದ್ದರು.

ಎಸ್‌ಐಟಿ ರಚನೆಯಾಗಬೇಕು

ಕೋಮು ಸಂಘರ್ಷಕ್ಕೆ ದಾರಿಮಾಡಿಕೊಂಡು ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುವ, ಕೋಮು ಪ್ರಚೋದನೆಗೆ ಕಾರಣ ಕರ್ತರು ಯಾರು ಎಂಬುದನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಪೊಲೀಸ್‌ನ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚನೆಯಾಗಬೇಕು ಎಂಬುದು ನನ್ನ ಬಲವಾದ ಆಗ್ರಹವಾಗಿದೆ. ಕೋಮು ಪ್ರಚೋದಿತ ಹತ್ಯೆಯ, ಸಂಘರ್ಷಗಳ ಸೂತ್ರಧಾರಿಗಳಿಗೆ ಶಿಕ್ಷೆ ಆದಾಗ ದ.ಕ. ಜಿಲ್ಲೆ ಸಾಮರಸ್ಯದ ನೆಲೆಬೀಡಾಗುತ್ತದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.

Vishwa News 24

Recent Posts

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

25 minutes ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

46 minutes ago

ಬೆಳ್ತಂಗಡಿ : ಜೂನ್ 1 ರಿಂದ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು – vishwanews24

ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…

55 minutes ago

50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್‌ – vishwanews24

50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್‌ ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು…

1 hour ago

ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ : ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ – vishwanews24

ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ ನವದೆಹಲಿ: ದಿವಂಗತ ಬಾಲಿವುಡ್ ನಟ ಧರ್ಮೇಂದ್ರ  ಅವರಿಗೆ…

1 hour ago

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಯುವಕ ಮೃತ್ಯು – vishwanews24

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಯುವಕ ಮೃತ್ಯು ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ…

2 hours ago