ದಿತ್ವಾ ಚಂಡಮಾರುತ ಎಫೆಕ್ಟ್ : ಕರಾವಳಿ ಸೇರಿ 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ – vishwanews24

Featured, ಉಡುಪಿ, ದಕ್ಷಿಣ ಕನ್ನಡ, ರಾಜ್ಯ ನ್ಯೂಸ್

ದಿತ್ವಾ ಚಂಡಮಾರುತ ಎಫೆಕ್ಟ್ : ಭಾರೀ ಮಳೆಯ ಮುನ್ಸೂಚನೆ ; ಕರಾವಳಿ ಸೇರಿ 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ದಿತ್ವಾ ಚಂಡಮಾರುತ ತಮಿಳುನಾಡು-ಪುದುಚೇರಿ ಕರಾವಳಿ ಸಮೀಪದಲ್ಲಿ ದುರ್ಬಲಗೊಂಡಿದ್ದರೂ ಕೂಡಾ ಕರ್ನಾಟಕದ ಹಲವು ಕರಾವಳಿ ಪ್ರದೇಶದಲ್ಲಿ ಮುನ್ನೆಚ್ಚರಿಕೆಯಾಗಿ 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.

ಉದ್ಯಾನನಗರಿಯಲ್ಲಿ ಶೀತಗಾಳಿ ಮುಂದುವರಿದಿದ್ದು, ಇನ್ನುಳಿದಂತೆ ದಿತ್ವಾ ಚಂಡಮಾರುತದ ಪರಿಣಾಮ ದಕ್ಷಿಣ ಒಳನಾಡು ಜಿಲ್ಲೆ ಹಾಗೂ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉಡುಪಿ:  ಬಿಜೆಪಿ ದೇಶವನ್ನು ಕಟ್ಟುವ ಬದಲು ಧರ್ಮ, ಜಾತಿಯನ್ನು ಕಟ್ಟುವ ಕೆಲಸ ಮಾಡುತ್ತಿದೆ : ಕಿಮ್ಮನೆ ರತ್ನಾಕರ್ – vishwanews24

ಕರಾವಳಿ ಜಿಲ್ಲೆಗಳು: ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ

ದಕ್ಷಿಣ ಒಳನಾಡು ಜಿಲ್ಲೆಗಳು: ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮೀಣ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಹಾಸನ.

ಸೆಂಟ್ರಲ್ ಜಿಲ್ಲೆಗಳು: ಬಳ್ಳಾರಿ, ದಾವಣಗೆರೆ, ಶಿವಮೊಗ್ಗ ಮತ್ತು ಚಿತ್ರದುರ್ಗ

ಬ್ರಹ್ಮಾವರ: ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಯುವತಿಗೆ ಲಕ್ಷಾಂತರ ರೂ. ಆನ್‌ಲೈನ್ ವಂಚನೆ – vishwanews24

ಡಿಸೆಂಬರ್ 5 ರವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ನಂತರ ರಾಜ್ಯಾದ್ಯಂತ ಒಣ ಹವಾಮಾನ ಇರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

Leave a Reply