Featured

ದಿನಕ್ಕೆ ಕನಿಷ್ಟ 5 ಸಾವಿರ LPG ಸಿಲಿಂಡರ್‌ಗಳನ್ನಾದರೂ ಪೂರೈಕೆ ಮಾಡಿ: ಹೋಟೆಲ್ ಮಾಲಕರ ಸಂಘ ಆಗ್ರಹ  – vishwanews24

ದಿನಕ್ಕೆ ಕನಿಷ್ಟ 5 ಸಾವಿರ ಎಲ್‍ಪಿಜಿ ಸಿಲಿಂಡರ್‌ಗಳನ್ನಾದರೂ ಪೂರೈಕೆ ಮಾಡಿ: ಹೋಟೆಲ್ ಮಾಲಕರ ಸಂಘ ಆಗ್ರಹ

ಬೆಂಗಳೂರು : ಸರಕಾರವು ರಾಜ್ಯದ ಎಲ್ಲ ಹೋಟೆಲ್‍ಗಳಿಗೆ ಕೇವಲ ಒಂದು ಸಾವಿರ ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್‌ಗಳನ್ನು ಮಾತ್ರ ಪೂರೈಕೆ ಮಾಡಲಾಗುವುದು ಹೇಳಿದೆ. ಇದರಿಂದ ಹೋಟೆಲ್ ಉದ್ಯಮಕ್ಕೆ ಮತ್ತಷ್ಟ ಸಂಕಷ್ಟ ಉಂಟಾಗುತ್ತದೆ. ಹೀಗಾಗಿ ದಿನಕ್ಕೆ ಕನಿಷ್ಟ 5 ಸಾವಿರ ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್‌ಗಳನ್ನಾದರೂ ಪೂರೈಕೆ ಮಾಡಬೇಕು ಎಂದು ಹೋಟೆಲ್ ಮಾಲಕರ ಸಂಘ ಆಗ್ರಹಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಂಘದ ಅಧ್ಯಕ್ಷ ಸುಬ್ರಮಣ್ಯ ಹೊಳ್ಳ, ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್ ಕೊರತೆಯಿಂದ ರಾಜ್ಯದ ಹೋಟೆಲ್ ಉದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಕೇವಲ ಐದು ದಿನಗಳಲ್ಲಿ 100 ಕೋಟಿ ರೂ.ಗೂ ಅಧಿಕ ನಷ್ಟವನ್ನು ಅನುಭವಿಸಿದೆ ಎಂದು ಹೇಳಿದರು.

ಇದನ್ನೂ ಓದಿ : 

ರಾಜ್ಯದಲ್ಲಿರುವ ಎಲ್ಲ ಹೋಟೆಲ್‍ಗಳಿಗೆ ಪ್ರತಿನಿತ್ಯ ಸುಮಾರು 40 ಸಾವಿರಕ್ಕೂ ಅಧಿಕ ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್ ಪೂರೈಕೆ ಮಾಡಲಾಗುತ್ತಿತ್ತು. ಆದರೆ ಈಗ ಕೇವಲ ಒಂದು ಸಾವಿರ ಸಿಲಿಂಡರ್‌ ಗಳನ್ನು ಪೂರೈಕೆ ಮಾಡಲಾಗುತ್ತದೆ ಎಂದು ಸರಕಾರ ಹೇಳಿದ್ದು, ಇದರಿಂದ ಉದ್ಯಮಕ್ಕೆ ನಷ್ಟವಾಗುತ್ತದೆ. ಈಗಾಗಲೇ ಎಲ್‍ಪಿಜಿ ಗ್ಯಾಸ್ ಕೊರತೆಯಿಂದ ಅನೇಕ ಹೋಟೆಲ್‍ಗಳಲ್ಲಿ ಅಡುಗೆ ಕಾರ್ಯಕ್ಕೆ ತೊಂದರೆ ಉಂಟಾಗಿದೆ. ಹೀಗಾಗಿ ಸರಕಾರವು ಹೋಟೆಲ್ ಉದ್ಯಮಕ್ಕೆ ತೆರಿಗೆ ವಿನಾಯಿತಿ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ :

ನಮ್ಮ ಸಂಘಟನೆಯ ವ್ಯಾಪ್ತಿಯಲ್ಲಿರುವ ಹೋಟೆಲ್‍ಗಳನ್ನು ಇದುವರೆಗೆ ಬಂದ್ ಮಾಡಿಲ್ಲ. ಸಾಧ್ಯವಾಗುವ ಮಟ್ಟಿಗೆ ವಿದ್ಯುತ್ ಒಲೆ, ಸೌದೆಯನ್ನು ಬಳಕೆ ಮಾಡಿ, ಅಡುಗೆಯನ್ನು ಮಾಡಲಾಗುತ್ತಿದೆ. ಇನ್ನು ಮುಂದೆಯೂ ಹೋಟೆಲ್‍ಗಳನ್ನು ಬಂದ್ ಮಾಡುವ ಉದ್ದೇಶವಿಲ್ಲ. ಆದರೆ ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್‍ಗಳ ಪೂರೈಕೆ ಕಡಿಮೆಯಾದರೆ ಬಹುತೇಕ ಹೋಟಲ್‍ಗಳನ್ನು ಬಂದ್ ಮಾಡುವ ಪರಿಸ್ಥಿತಿ ಬರಬಹುದು ಎಂದು ಅವರು ಹೇಳಿದರು.

ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದೇವೆ. ಒಟ್ಟು ಸಿಲಿಂಡರ್ ಪೂರೈಕೆಯಲ್ಲಿ ಹೋಟೆಲ್ ಉದ್ಯಮಕ್ಕೆ ಕನಿಷ್ಠ ಕೋಟಾ ನೀಡಬೇಕು ಎಂದು ಮನವಿ ಮಾಡುತ್ತೇವೆ. ಅವರು ಯಾವ ರೀತಿ ಸ್ಪಂದಿಸುತ್ತಾರೆ ಎಂಬುದನ್ನು ನೋಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಇದಕ್ಕಾಗಿ ದಿಲ್ಲಿಗೆ ಹೋಗಲು ಸಿದ್ಧತೆಯನ್ನೂ ಮಾಡಿಕೊಂಡಿದ್ದೇವೆ ಎಂದು ಅವರು ತಿಳಿಸಿದರು.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

13 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

14 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

15 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

16 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

16 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

16 hours ago