Featured

ದಿನೇಶ್‌ ಗುಂಡೂರಾವ್‌ ಪಕ್ಷದ ಅಧ್ಯಕ್ಷರಾಗಿರುವ ತನಕ ಕಾಂಗ್ರೆಸ್‌ ಪಕ್ಷ ಉದ್ಧಾರ ಆಗುವುದಿಲ್ಲ : ಬಿ.ಸಿ. ಪಾಟೀಲ್‌ -Vishwanews24

ಬೆಂಗಳೂರು: ದಿನೇಶ್‌ ಗುಂಡೂರಾವ್‌ ಪಕ್ಷದ ಅಧ್ಯಕ್ಷರಾಗಿರುವ ತನಕ ಕಾಂಗ್ರೆಸ್‌ ಪಕ್ಷ ಉದ್ಧಾರ ಆಗುವುದಿಲ್ಲ. ದಿನೇಶ್‌ ಗುಂಡೂರಾವ್‌ ಸರಿ ಇದ್ದಿದ್ದರೆ ನಾವು ಪಕ್ಷ ಬಿಟ್ಟು ಹೊರಬರುವ ಪ್ರಮೇಯವೇ ಉದ್ಭವಿಸುತ್ತಿರಲಿಲ್ಲ ಎಂದು ಹಿರೇಕೆರೂರು ಕ್ಷೇತ್ರದ ಅನರ್ಹಗೊಂಡಿರುವ ಶಾಸಕ ಬಿ.ಸಿ. ಪಾಟೀಲ್‌ ಕಿಡಿಕಾರಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನೇಶ್‌ ಗುಂಡೂರಾವ್‌ ಪಕ್ಷದ ಅಧ್ಯಕ್ಷರಾಗಿರುವವರೆಗೂ ಪಕ್ಷದ ಪರಿಸ್ಥಿತಿ ಹೀಗೆಯೇ ಮುಂದುವರೆಯುತ್ತದೆ. ಗುಂಡೂರಾವ್‌ ಅಧ್ಯಕ್ಷರಾಗಿ ಅಧಿಕಾರ ಪಡೆಯುವ ಮೊದಲು ಒಂಬತ್ತು ಮಂದಿ ಸಂಸದರಿದ್ದರು, ಈಗ ಒಬ್ಬರೇ ಒಬ್ಬರು ಇದ್ದಾರೆ. ದಿನೇಶ್‌ ಗುಂಡೂರಾವ್‌ ಅವರಿಂದಲೇ ಮೈತ್ರಿ ಸರ್ಕಾರವೂ ಪತನವಾಯಿತು. ದಿನೇಶ್‌ ಗುಂಡೂರಾವ್‌ ಸರಿ ಇದ್ದಿದ್ದರೆ ಸಮ್ಮಿಶ್ರ ಸರ್ಕಾರ ಮುಂದುವರೆಯುತ್ತಿತ್ತು ಎಂದು ಹೇಳಿದರು.

ದಿನೇಶ್‌ ಗುಂಡೂರಾವ್‌ ಅವರ ಕುರಿತು ಎಸ್‌.ಟಿ. ಸೋಮಶೇಖರ್‌ ಹೇಳಿಕೆ ಸರಿ ಇದೆ. ಅಧ್ಯಕ್ಷರಾದವರು ಒಂದು ಕಡೆ ವಾಲಬಾರದು. ಒಬ್ಬರಿಗೊಂದು, ಮತ್ತೊಬ್ಬರಿಗೊಂದು ರೀತಿಯಲ್ಲಿ ಮಾಡಬಾರದು. ಎಲ್ಲರನ್ನೂ ಸಮಾನ ಚಿತ್ತದಿಂದ ನೋಡಬೇಕು, ಜತೆಗೆ ಹೇಳಿದಂತೆ ನಡೆದುಕೊಳ್ಳಬೇಕು ಎಂದರು.

ಅನರ್ಹಗೊಂಡಿರುವ ಶಾಸಕರಿಗೆ ಟಿಕೆಟ್‌ ನೀಡುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಹೇಳಿಕೆ ಕೊಟ್ಟಿರುವುದು ಸಂತೋಷ ತಂದಿದೆ. ಮುಖ್ಯಮಂತ್ರಿಗಳ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಎಂದು ಪ್ರತಿಕ್ರಿಯಿಸಿದರು.

 

Vishwa News 24

Recent Posts

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

9 minutes ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

22 minutes ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

30 minutes ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

50 minutes ago

80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಡಿಕೆಶಿ ಧ್ವಜಾರೋಹಣ – vishwanews24

80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…

1 hour ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ – vishwanews24

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ…

1 hour ago