ಬೆಂಗಳೂರು: ದಿನೇಶ್ ಗುಂಡೂರಾವ್ ಪಕ್ಷದ ಅಧ್ಯಕ್ಷರಾಗಿರುವ ತನಕ ಕಾಂಗ್ರೆಸ್ ಪಕ್ಷ ಉದ್ಧಾರ ಆಗುವುದಿಲ್ಲ. ದಿನೇಶ್ ಗುಂಡೂರಾವ್ ಸರಿ ಇದ್ದಿದ್ದರೆ ನಾವು ಪಕ್ಷ ಬಿಟ್ಟು ಹೊರಬರುವ ಪ್ರಮೇಯವೇ ಉದ್ಭವಿಸುತ್ತಿರಲಿಲ್ಲ ಎಂದು ಹಿರೇಕೆರೂರು ಕ್ಷೇತ್ರದ ಅನರ್ಹಗೊಂಡಿರುವ ಶಾಸಕ ಬಿ.ಸಿ. ಪಾಟೀಲ್ ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನೇಶ್ ಗುಂಡೂರಾವ್ ಪಕ್ಷದ ಅಧ್ಯಕ್ಷರಾಗಿರುವವರೆಗೂ ಪಕ್ಷದ ಪರಿಸ್ಥಿತಿ ಹೀಗೆಯೇ ಮುಂದುವರೆಯುತ್ತದೆ. ಗುಂಡೂರಾವ್ ಅಧ್ಯಕ್ಷರಾಗಿ ಅಧಿಕಾರ ಪಡೆಯುವ ಮೊದಲು ಒಂಬತ್ತು ಮಂದಿ ಸಂಸದರಿದ್ದರು, ಈಗ ಒಬ್ಬರೇ ಒಬ್ಬರು ಇದ್ದಾರೆ. ದಿನೇಶ್ ಗುಂಡೂರಾವ್ ಅವರಿಂದಲೇ ಮೈತ್ರಿ ಸರ್ಕಾರವೂ ಪತನವಾಯಿತು. ದಿನೇಶ್ ಗುಂಡೂರಾವ್ ಸರಿ ಇದ್ದಿದ್ದರೆ ಸಮ್ಮಿಶ್ರ ಸರ್ಕಾರ ಮುಂದುವರೆಯುತ್ತಿತ್ತು ಎಂದು ಹೇಳಿದರು.
ದಿನೇಶ್ ಗುಂಡೂರಾವ್ ಅವರ ಕುರಿತು ಎಸ್.ಟಿ. ಸೋಮಶೇಖರ್ ಹೇಳಿಕೆ ಸರಿ ಇದೆ. ಅಧ್ಯಕ್ಷರಾದವರು ಒಂದು ಕಡೆ ವಾಲಬಾರದು. ಒಬ್ಬರಿಗೊಂದು, ಮತ್ತೊಬ್ಬರಿಗೊಂದು ರೀತಿಯಲ್ಲಿ ಮಾಡಬಾರದು. ಎಲ್ಲರನ್ನೂ ಸಮಾನ ಚಿತ್ತದಿಂದ ನೋಡಬೇಕು, ಜತೆಗೆ ಹೇಳಿದಂತೆ ನಡೆದುಕೊಳ್ಳಬೇಕು ಎಂದರು.
ಅನರ್ಹಗೊಂಡಿರುವ ಶಾಸಕರಿಗೆ ಟಿಕೆಟ್ ನೀಡುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿಕೆ ಕೊಟ್ಟಿರುವುದು ಸಂತೋಷ ತಂದಿದೆ. ಮುಖ್ಯಮಂತ್ರಿಗಳ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಎಂದು ಪ್ರತಿಕ್ರಿಯಿಸಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…