ಬೆಂಗಳೂರು: ಇಂದು ಕರ್ನಾಟಕ ಲೋಕಸಭಾ ಮತ್ತು ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಟ್ವಿಟ್ಟರಿನಲ್ಲಿ ಕರ್ನಾಟಕದ ಜನು ಬಿಜೆಪಿಯ ನೆಗೆಟಿವ್ ಸರ್ಕಾರವನ್ನು ತಿರಸ್ಕರಿಸಿದೆ ಎನ್ನುವ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ಅವರಿಗೆ ರೀ-ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರ ಸದ್ದು ಮಾಡುತ್ತಿದೆ. 4-1 ಗೆಲುವು ಸಾಧಿಸಿ ಬಿಜೆಪಿಯನ್ನು ಹೊಡೆದು ಕಳುಹಿಸಿದೆ. ಕರ್ನಾಟಕದ ಜನರು ಬಿಜೆಪಿಯ ನೆಗೆಟಿವ್ ಸರ್ಕಾರವನ್ನು ತಿರಸ್ಕರಿಸಿದೆ. ಜನರ ಸಮಸ್ಯೆ ಬಗೆ ಹರಿಸುವುದರಲ್ಲಿ ಮೋದಿ ಸರ್ಕಾರ ವಿಫಲವಾಗಿದೆ. ಎಲ್ಲ ವಿಜೇತರಿಗೆ ನನ್ನ ಅಭಿನಂದನೆಗಳು ಎಂದು ಎಂದು ದಿನೇಶ್ ಗುಂಡುರಾವ್ ಟ್ವೀಟ್ ಮಾಡಿದ್ದರು.
ಈ ಟ್ವೀಟ್ಗೆ ಸಂಸದ ಪ್ರತಾಪ್ ಸಿಂಹ ರೀ-ಟ್ವೀಟ್ ಮಾಡಿ, “ಮೊದಲು ಸತ್ಯವನ್ನು ತಿಳಿದುಕೊಳ್ಳಿ. 4-1ರ ಗೆಲುವು ಅಲ್ಲ ಅದು 1-1ರ ಗೆಲುವು. ನಾವು ಬಳ್ಳಾರಿಯಲ್ಲಿ ಸೋತಿದ್ದರೂ ಶಿವಮೊಗ್ಗವನ್ನು ಉಳಿಸಿಕೊಂಡಿದ್ದೇವೆ. ನೀವು ಬಳ್ಳಾರಿಯನ್ನು ಗೆದ್ದುಕೊಂಡು ಜಮಖಂಡಿಯನ್ನು ಉಳಿಸಿಕೊಂಡಿದ್ದೀರಿ. ಜೆಡಿಎಸ್ ರಾಮನಗರ, ಮಂಡ್ಯವನ್ನು ಗೆದ್ದುಕೊಂಡರೂ ಶಿವಮೊಗ್ಗದಲ್ಲಿ ವಿಫಲವಾಗಿದೆ. ಆದರೆ ಈ ಸಂಭ್ರಮಕ್ಕೆ ಮೊದಲು ನಂಜನಗೂಡು ಮತ್ತು ಗುಂಡ್ಲುಪೇಟೆಯನ್ನು ಮರೆಯಬೇಡಿ ಎಂದು ಟ್ವೀಟ್ ಮಾಡಿ ಟಾಂಗ್ ಕೊಟ್ಟಿದ್ದಾರೆ.
ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಉಗ್ರಪ್ಪ, ಶಿವಮೊಗ್ಗದಲ್ಲಿ ರಾಘವೇಂದ್ರ, ಮಂಡ್ಯದಲ್ಲಿ ಶಿವರಾಮೇಗೌಡ ಜಯಗಳಿಸಿದ್ದಾರೆ. ವಿಧಾನಸಭಾ ಉಪಚುನಾವಣೆ ನಡೆದ ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ, ಜಮಖಂಡಿಯಲ್ಲಿ ಆನಂದ್ ನ್ಯಾಮಗೌಡ ಗೆದ್ದಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…