Categories: ಉಡುಪಿ

ದಿನೇಶ್ ಗುಂಡೂರಾವ್‍ಗೆ ಚುನಾವಣೆ ಸೋಲು ಗೆಲುವಿನ ಅರ್ಥ ಹೇಳಿಕೊಟ್ಟ ಪ್ರತಾಪ್ ಸಿಂಹ…! ವೈರಲ್ ಆಯ್ತು ಈ ಟ್ವೀಟ್

ಬೆಂಗಳೂರು: ಇಂದು ಕರ್ನಾಟಕ ಲೋಕಸಭಾ ಮತ್ತು ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಟ್ವಿಟ್ಟರಿನಲ್ಲಿ ಕರ್ನಾಟಕದ ಜನು ಬಿಜೆಪಿಯ ನೆಗೆಟಿವ್ ಸರ್ಕಾರವನ್ನು ತಿರಸ್ಕರಿಸಿದೆ ಎನ್ನುವ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ಅವರಿಗೆ ರೀ-ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರ ಸದ್ದು ಮಾಡುತ್ತಿದೆ. 4-1 ಗೆಲುವು ಸಾಧಿಸಿ ಬಿಜೆಪಿಯನ್ನು ಹೊಡೆದು ಕಳುಹಿಸಿದೆ. ಕರ್ನಾಟಕದ ಜನರು ಬಿಜೆಪಿಯ ನೆಗೆಟಿವ್ ಸರ್ಕಾರವನ್ನು ತಿರಸ್ಕರಿಸಿದೆ. ಜನರ ಸಮಸ್ಯೆ ಬಗೆ ಹರಿಸುವುದರಲ್ಲಿ ಮೋದಿ ಸರ್ಕಾರ ವಿಫಲವಾಗಿದೆ. ಎಲ್ಲ ವಿಜೇತರಿಗೆ ನನ್ನ ಅಭಿನಂದನೆಗಳು ಎಂದು ಎಂದು ದಿನೇಶ್ ಗುಂಡುರಾವ್ ಟ್ವೀಟ್ ಮಾಡಿದ್ದರು.

ಈ ಟ್ವೀಟ್‍ಗೆ ಸಂಸದ ಪ್ರತಾಪ್ ಸಿಂಹ ರೀ-ಟ್ವೀಟ್ ಮಾಡಿ, “ಮೊದಲು ಸತ್ಯವನ್ನು ತಿಳಿದುಕೊಳ್ಳಿ. 4-1ರ ಗೆಲುವು ಅಲ್ಲ ಅದು 1-1ರ ಗೆಲುವು. ನಾವು ಬಳ್ಳಾರಿಯಲ್ಲಿ ಸೋತಿದ್ದರೂ ಶಿವಮೊಗ್ಗವನ್ನು ಉಳಿಸಿಕೊಂಡಿದ್ದೇವೆ. ನೀವು ಬಳ್ಳಾರಿಯನ್ನು ಗೆದ್ದುಕೊಂಡು ಜಮಖಂಡಿಯನ್ನು ಉಳಿಸಿಕೊಂಡಿದ್ದೀರಿ. ಜೆಡಿಎಸ್ ರಾಮನಗರ, ಮಂಡ್ಯವನ್ನು ಗೆದ್ದುಕೊಂಡರೂ ಶಿವಮೊಗ್ಗದಲ್ಲಿ ವಿಫಲವಾಗಿದೆ. ಆದರೆ ಈ ಸಂಭ್ರಮಕ್ಕೆ ಮೊದಲು ನಂಜನಗೂಡು ಮತ್ತು ಗುಂಡ್ಲುಪೇಟೆಯನ್ನು ಮರೆಯಬೇಡಿ ಎಂದು ಟ್ವೀಟ್ ಮಾಡಿ ಟಾಂಗ್ ಕೊಟ್ಟಿದ್ದಾರೆ.

ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಉಗ್ರಪ್ಪ, ಶಿವಮೊಗ್ಗದಲ್ಲಿ ರಾಘವೇಂದ್ರ, ಮಂಡ್ಯದಲ್ಲಿ ಶಿವರಾಮೇಗೌಡ ಜಯಗಳಿಸಿದ್ದಾರೆ. ವಿಧಾನಸಭಾ ಉಪಚುನಾವಣೆ ನಡೆದ ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ, ಜಮಖಂಡಿಯಲ್ಲಿ ಆನಂದ್ ನ್ಯಾಮಗೌಡ ಗೆದ್ದಿದ್ದಾರೆ.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

5 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

5 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

5 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

6 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

6 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

7 hours ago