ಬೆಂಗಳೂರು: ಇಂದು ಕರ್ನಾಟಕ ಲೋಕಸಭಾ ಮತ್ತು ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಟ್ವಿಟ್ಟರಿನಲ್ಲಿ ಕರ್ನಾಟಕದ ಜನು ಬಿಜೆಪಿಯ ನೆಗೆಟಿವ್ ಸರ್ಕಾರವನ್ನು ತಿರಸ್ಕರಿಸಿದೆ ಎನ್ನುವ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ಅವರಿಗೆ ರೀ-ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರ ಸದ್ದು ಮಾಡುತ್ತಿದೆ. 4-1 ಗೆಲುವು ಸಾಧಿಸಿ ಬಿಜೆಪಿಯನ್ನು ಹೊಡೆದು ಕಳುಹಿಸಿದೆ. ಕರ್ನಾಟಕದ ಜನರು ಬಿಜೆಪಿಯ ನೆಗೆಟಿವ್ ಸರ್ಕಾರವನ್ನು ತಿರಸ್ಕರಿಸಿದೆ. ಜನರ ಸಮಸ್ಯೆ ಬಗೆ ಹರಿಸುವುದರಲ್ಲಿ ಮೋದಿ ಸರ್ಕಾರ ವಿಫಲವಾಗಿದೆ. ಎಲ್ಲ ವಿಜೇತರಿಗೆ ನನ್ನ ಅಭಿನಂದನೆಗಳು ಎಂದು ಎಂದು ದಿನೇಶ್ ಗುಂಡುರಾವ್ ಟ್ವೀಟ್ ಮಾಡಿದ್ದರು.
ಈ ಟ್ವೀಟ್ಗೆ ಸಂಸದ ಪ್ರತಾಪ್ ಸಿಂಹ ರೀ-ಟ್ವೀಟ್ ಮಾಡಿ, “ಮೊದಲು ಸತ್ಯವನ್ನು ತಿಳಿದುಕೊಳ್ಳಿ. 4-1ರ ಗೆಲುವು ಅಲ್ಲ ಅದು 1-1ರ ಗೆಲುವು. ನಾವು ಬಳ್ಳಾರಿಯಲ್ಲಿ ಸೋತಿದ್ದರೂ ಶಿವಮೊಗ್ಗವನ್ನು ಉಳಿಸಿಕೊಂಡಿದ್ದೇವೆ. ನೀವು ಬಳ್ಳಾರಿಯನ್ನು ಗೆದ್ದುಕೊಂಡು ಜಮಖಂಡಿಯನ್ನು ಉಳಿಸಿಕೊಂಡಿದ್ದೀರಿ. ಜೆಡಿಎಸ್ ರಾಮನಗರ, ಮಂಡ್ಯವನ್ನು ಗೆದ್ದುಕೊಂಡರೂ ಶಿವಮೊಗ್ಗದಲ್ಲಿ ವಿಫಲವಾಗಿದೆ. ಆದರೆ ಈ ಸಂಭ್ರಮಕ್ಕೆ ಮೊದಲು ನಂಜನಗೂಡು ಮತ್ತು ಗುಂಡ್ಲುಪೇಟೆಯನ್ನು ಮರೆಯಬೇಡಿ ಎಂದು ಟ್ವೀಟ್ ಮಾಡಿ ಟಾಂಗ್ ಕೊಟ್ಟಿದ್ದಾರೆ.
ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಉಗ್ರಪ್ಪ, ಶಿವಮೊಗ್ಗದಲ್ಲಿ ರಾಘವೇಂದ್ರ, ಮಂಡ್ಯದಲ್ಲಿ ಶಿವರಾಮೇಗೌಡ ಜಯಗಳಿಸಿದ್ದಾರೆ. ವಿಧಾನಸಭಾ ಉಪಚುನಾವಣೆ ನಡೆದ ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ, ಜಮಖಂಡಿಯಲ್ಲಿ ಆನಂದ್ ನ್ಯಾಮಗೌಡ ಗೆದ್ದಿದ್ದಾರೆ.
ಉಡುಪಿ : ಕೃಷಿ ಪ್ರಶಸ್ತಿ ; ಅರ್ಜಿ ಆಹ್ವಾನ ಉಡುಪಿ : ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ…
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…