ದಿಲ್ಲಿಯಲ್ಲಿ ರೈತರ ಹೆಸರಿನಲ್ಲಿ ಹೋರಾಟ ನಡೆಸುತ್ತಿರುವವರು ರೈತರೇ ಅಲ್ಲ : ಪೇಜಾವರ ವಿಶ್ವಪ್ರಸನ್ನ ಶ್ರೀ -Vishwanews24
ದಿಲ್ಲಿಯಲ್ಲಿ ರೈತರ ಹೆಸರಿನಲ್ಲಿ ಹೋರಾಟ ನಡೆಸುತ್ತಿರುವವರು ರೈತರೇ ಅಲ್ಲ : ಪೇಜಾವರ ಶ್ರೀ -Vishwanews24
ರಾಯಚೂರು: ದಿಲ್ಲಿಯಲ್ಲಿ ರೈತರ ಹೆಸರಿನಲ್ಲಿ ಹೋರಾಟ ನಡೆಸುತ್ತಿರುವವರು ರೈತರೇ ಅಲ್ಲ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಹೇಳಿದ್ದಾರೆ.
ರಾಯಚೂರಿನಲ್ಲಿ ಮಾತನಾಡಿದ ಅವರು, ದಿಲ್ಲಿಯಲ್ಲಿ ರೈತರ ಹೆಸರಿನಲ್ಲಿ ಹೋರಾಟ ನಡೆಯುತ್ತಿದೆ. ಅವರು ರೈತರೇ ಅಲ್ಲ, ರೈತರು ಹೊಲದಲ್ಲಿ ದುಡಿಯುತ್ತಿದ್ದಾರೆ. ರಾಷ್ಟ್ರ ಧ್ವಜಕ್ಕೆ ಅಪಮಾನ, ಖಲಿಸ್ತಾನದ ಪರವಾಗಿ ಘೋಷಣೆ ಮಾಡಿದವರು ಹೇಗೆ ರೈತರಾಗುತ್ತಾರೆ. ರಾಷ್ಟ್ರಕ್ಕೆ ಅವಮಾನ ಮಾಡುವವರು ಹೇಗೆ ರೈತರಾಗುತ್ತಾರೆ ಎಂದು ಪೇಜಾವರ ಶ್ರೀ ಪ್ರಶ್ನಿಸಿದ್ದಾರೆ.
ನಮ್ಮ ಪಕ್ಷ ತೀರ್ಮಾನ ಮಾಡಿದೆ , ಬಹುತೇಕ ನಾನೇ ಸಭಾಪತಿ ಅಭ್ಯರ್ಥಿ ಆಗುತ್ತೇನೆ : ಬಸವರಾಜ ಹೊರಟ್ಟಿ -Vishwanews24
ಬೆಂಗಳೂರಿನಲ್ಲಿ ಚಿಂತಕ ಕೆ. ಎಸ್. ಭಗವಾನರಿಗೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಮೊದಲು ಅವರು ಪ್ರಚೋದನಕಾರಿ ಮಾತನಾಡಿದ್ದಾರೆ. ಆ ಕಾರಣಕ್ಕೆ ವಕೀಲೆಯೊಬ್ಬರು ಅವರ ಮುಖಕ್ಕೆ ಮಸಿ ಬಳಿದಿದ್ದಾರೆ. ಭಗವಾನ್ ಮಾತನಾಡಿದ್ದು ತಪ್ಪು, ವಕೀಲರು ಕೋರ್ಟಿನಲ್ಲಿ ಮಸಿ ಬಳಿದಿದ್ದು ಸಹ ತಪ್ಪು. ಪ್ರಚಾರಕ್ಕಾಗಿ ದೇವರು, ಧರ್ಮದ ಬಗ್ಗೆ ಮಾತನಾಡಬಾರದು ಎಂದು ಅಭಿಪ್ರಾಯಪಟ್ಟರು.
ರಾಮ ಮಂದಿರ ನಿರ್ಮಾಣ ವೀಕ್ಷಣೆಗೆ ಅವಕಾಶ ನೀಡದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ನಿರ್ಮಾಣ ಕಾರ್ಯದಲ್ಲಿ ಬೃಹತ್ ಯಂತ್ರಗಳು, ಶಿಲೆಗಳಿವೆ. ಹೀಗಾಗಿ ವೀಕ್ಷಣೆಗೆ ಅವಕಾಶ ಮೊದಲಿನಿಂದಲೂ ನೀಡಿಲ್ಲ ಎಂದರು.ಇನ್ನು ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹ ಅಭಿಯಾನ ಕೆಲವು ಕಡೆ ಮುಗಿದಿದೆ. ಇನ್ನೂ ನೀಡುವವರು ಸಹ ಸಹಾಯ ಮಾಡಬಹುದು ಎಂದರು.
