ಹೊಸದಿಲ್ಲಿ: ದಿಲ್ಲಿ ವಿಧಾನಸಭಾ ಕಟ್ಟಡದಲ್ಲಿ ಗುರುವಾರ ಸುರಂಗ ರೀತಿಯ ನಿರ್ಮಾಣವೊಂದು ಪತ್ತೆಯಾಗಿದೆ. ಈ ಕುರಿತು ಮಾಹಿತಿ ನೀಡಿದ ಸ್ಪೀಕರ್ ರಾಮ್ ನಿವಾಸ್ ಗೋಯೆಲ್, ಈ ಸುರಂಗವು ವಿಧಾನಸಭಾ ಕಟ್ಟಡವನ್ನು ಕೆಂಪು ಕೋಟೆಗೆ ಸಂಪರ್ಕ ಕಲ್ಪಿಸುತ್ತದೆ ಹಾಗೂ ಬ್ರಿಟಿಷರ ಕಾಲದಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಕೋರ್ಟಿಗೆ ಸಾಗಿಸುವ ಸಂದರ್ಭ ಜನರಿಂದ ವಿರೋಧ ಎದುರಾಗದಂತೆ ಈ ಸುರಂಗ ಮಾರ್ಗದಲ್ಲಿ ರಹಸ್ಯವಾಗಿ ಸಾಗಿಸಲಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.
“ನಾನು 1993ರಲ್ಲಿ ಶಾಸಕನಾದಾಗ ಈ ಸುರಂಗದ ಬಗ್ಗೆ ಕೆಲವರು ಮಾತನಾಡುವುದನ್ನು ಕೇಳಿದ್ದೆ. ಆದರೆ ಯಾವುದೇ ಸ್ಪಷ್ಟತೆಯಿರಲಿಲ್ಲ. ಈಗ ಸುರಂಗದ ಬಾಯಿ ಪತ್ತೆಯಾಗಿದೆ ಆದರೆ ಇನ್ನೂ ಹೆಚ್ಚು ಅಗೆಯುವ ಕೆಲಸ ನಡೆಸಲಾಗುವುದಿಲ್ಲ. ಸುರಂಗದ ಮುಂದಿನ ಭಾಗಗಳು ಮೆಟ್ರೋ ಕಾಮಗಾರಿ ಹಾಗೂ ಒಳಚರಂಡಿಗಳಿಂದಾಗಿ ನಾಶವಾಗಿರಬಹುದು,” ಎಂದು ಅವರು ಹೇಳಿದರು.
“1912ರಲ್ಲಿ ರಾಜಧಾನಿಯನ್ನು ಬ್ರಿಟಿಷರು ಕೊಲ್ಕತ್ತಾದಿಂದ ದಿಲ್ಲಿಗೆ ವರ್ಗಾಯಿಸಿದ ನಂತರ 1926ರಲ್ಲಿ ಅದನ್ನು ನ್ಯಾಯಾಲಯವಾಗಿ ಬಳಸುತ್ತಿದ್ದ ಸಂದರ್ಭ ಈ ಸುರಂಗ ಮಾರ್ಗದಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಕೋರ್ಟಿಗೆ ಹಾಜರುಪಡಿಸಲು ಬಳಸಲಾಗುತ್ತಿತ್ತು,” ಎಂದು ಹೇಳಿದರು.
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…
ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ ಶಿರ್ವ: ಶಿರ್ವ ಮತ್ತು ಕುತ್ಯಾರು ಗ್ರಾ.ಪಂ.…
ಗ್ಯಾಸ್ ಏಜೆನ್ಸಿಗಳಿಂದ ಎಲ್ಪಿಜಿ ಪೂರೈಕೆ: ನೆಟ್ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ: ನೆಟ್ವರ್ಕ್…
ಕಟಪಾಡಿ: ಮಟ್ಟು ಬೀಚ್ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು ಸುರಕ್ಷ ಕಾಮಗಾರಿ ಆರಂಭ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.…
ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…