Categories: ಉಡುಪಿ

ದಿಲ್ಲಿ ಹೈಕೋರ್ಟಿನಲ್ಲಿ ಇಂದು ಡಿಕೆಶಿ ತಾಯಿ, ಪತ್ನಿ ಅರ್ಜಿ ವಿಚಾರಣೆ= vishwanews24

ನವದೆಹಲಿ: ಇಡಿ ಸಮನ್ಸ್ ರದ್ದು ಮತ್ತು ಬೆಂಗಳೂರಿನಲ್ಲಿ ವಿಚಾರಣೆ ನಡೆಸುವಂತೆ ಕೋರಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಪತ್ನಿ ಮತ್ತು ತಾಯಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆಗೆ ಬರಲಿದೆ.

ದೆಹಲಿ ಹೈಕೋರ್ಟ್ ನ ನ್ಯಾ. ಬ್ರಿಜೇಶ್ ಸೇಥಿ ನೇತೃತ್ವದ ಏಕ ಸದಸ್ಯ ಪೀಠದಲ್ಲಿ ವಿಚಾರಣೆ ಬರಲಿದ್ದು, ಇಂದು ನಿರ್ಣಾಯಕ ಆದೇಶ ಹೊರ ಬರುವ ಸಾಧ್ಯತೆ ಇದೆ. ನಾಳೆ ದೆಹಲಿಯ ಇಡಿ ಕಚೇರಿಗೆ ಬಂದು ವಿಚಾರಣೆ ಹಾಜರಾಗಬೇಕು ಅಂತಾ ಈಗಾಗಲೇ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದು, ಇಂದು ಹೈ ಕೋರ್ಟ್ ನೀಡುವ ಮಧ್ಯಂತರ ಆದೇಶ ಡಿ.ಕೆ ಕುಟುಂಬಕ್ಕೆ ಮಹತ್ವ ಆಗಲಿದೆ.

ಅಕ್ರಮ ಹಣ ವರ್ಗಾವಣೆ ಮತ್ತು ಬೇನಾಮಿ ಆಸ್ತಿ ಗಳಿಕೆ ಪ್ರಕರಣದಡಿ ದೆಹಲಿ ಇಡಿ ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸುವಂತೆ ಕಳೆದ ತಿಂಗಳು ಇಡಿ ಅಧಿಕಾರಿಗಳು ಡಿ.ಕೆ ಶಿವಕುಮಾರ್ ಪತ್ನಿ ಉಷಾ ಮತ್ತು ತಾಯಿ ಗೌರಮ್ಮ ಅವರಿಗೆ ಸಮನ್ಸ್ ನೀಡಿದ್ದರು. ಆದರೆ ವಯೋಸಹಜ ಆರೋಗ್ಯ ಸಮಸ್ಯೆಗಳ ಕಾರಣದಿಂದ ಗೌರಮ್ಮ ದೆಹಲಿಯಲ್ಲಿ ವಿಚಾರಣೆ ಹಾಜರಾಗಲು ಸಾಧ್ಯವಿಲ್ಲ ಜೊತೆಗೆ ಉಷಾ ಅವರನ್ನು ಬೆಂಗಳೂರಿನಲ್ಲೇ ವಿಚಾರಣೆ ಒಳ ಪಡಿಸಬೇಕು ಅಂತಾ ಮನವಿ ಮಾಡಿ ದಿಲ್ಲಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು.

ಈಗಾಗಲೇ ನಾಲ್ಕು ಬಾರಿ ಈ ಅರ್ಜಿ ವಿಚಾರಣೆ ನಡೆಸಿರುವ ಪೀಠ ಇಂದು ನಿರ್ಣಾಯಕ ತಿರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ. ಉಷಾ ಮತ್ತು ಗೌರಮ್ಮ ಅವರ ಮನವಿಗೆ ಒಪ್ಪಿಕೊಂಡಲ್ಲಿ ಬೆಂಗಳೂರಿನಲ್ಲಿ ವಿಚಾರಣೆ ನಡೆಯಲಿದ್ದು, ಹೈ ಕೋರ್ಟ್ ಇವರ ಮನವಿ ತಿರಸ್ಕರಿದಲ್ಲಿ ನಾಳೆ ದೆಹಲಿಯಲ್ಲಿ ಇಡಿ ಅಧಿಕಾರಿಗಳ ಮುಂದೆ ವಿಚಾರಣೆ ಒಳಪಡಬೇಕಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

12 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

12 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

12 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

13 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

13 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

14 hours ago