ನವದೆಹಲಿ: ಇಡಿ ಸಮನ್ಸ್ ರದ್ದು ಮತ್ತು ಬೆಂಗಳೂರಿನಲ್ಲಿ ವಿಚಾರಣೆ ನಡೆಸುವಂತೆ ಕೋರಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಪತ್ನಿ ಮತ್ತು ತಾಯಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆಗೆ ಬರಲಿದೆ.
ದೆಹಲಿ ಹೈಕೋರ್ಟ್ ನ ನ್ಯಾ. ಬ್ರಿಜೇಶ್ ಸೇಥಿ ನೇತೃತ್ವದ ಏಕ ಸದಸ್ಯ ಪೀಠದಲ್ಲಿ ವಿಚಾರಣೆ ಬರಲಿದ್ದು, ಇಂದು ನಿರ್ಣಾಯಕ ಆದೇಶ ಹೊರ ಬರುವ ಸಾಧ್ಯತೆ ಇದೆ. ನಾಳೆ ದೆಹಲಿಯ ಇಡಿ ಕಚೇರಿಗೆ ಬಂದು ವಿಚಾರಣೆ ಹಾಜರಾಗಬೇಕು ಅಂತಾ ಈಗಾಗಲೇ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದು, ಇಂದು ಹೈ ಕೋರ್ಟ್ ನೀಡುವ ಮಧ್ಯಂತರ ಆದೇಶ ಡಿ.ಕೆ ಕುಟುಂಬಕ್ಕೆ ಮಹತ್ವ ಆಗಲಿದೆ.
ಅಕ್ರಮ ಹಣ ವರ್ಗಾವಣೆ ಮತ್ತು ಬೇನಾಮಿ ಆಸ್ತಿ ಗಳಿಕೆ ಪ್ರಕರಣದಡಿ ದೆಹಲಿ ಇಡಿ ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸುವಂತೆ ಕಳೆದ ತಿಂಗಳು ಇಡಿ ಅಧಿಕಾರಿಗಳು ಡಿ.ಕೆ ಶಿವಕುಮಾರ್ ಪತ್ನಿ ಉಷಾ ಮತ್ತು ತಾಯಿ ಗೌರಮ್ಮ ಅವರಿಗೆ ಸಮನ್ಸ್ ನೀಡಿದ್ದರು. ಆದರೆ ವಯೋಸಹಜ ಆರೋಗ್ಯ ಸಮಸ್ಯೆಗಳ ಕಾರಣದಿಂದ ಗೌರಮ್ಮ ದೆಹಲಿಯಲ್ಲಿ ವಿಚಾರಣೆ ಹಾಜರಾಗಲು ಸಾಧ್ಯವಿಲ್ಲ ಜೊತೆಗೆ ಉಷಾ ಅವರನ್ನು ಬೆಂಗಳೂರಿನಲ್ಲೇ ವಿಚಾರಣೆ ಒಳ ಪಡಿಸಬೇಕು ಅಂತಾ ಮನವಿ ಮಾಡಿ ದಿಲ್ಲಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು.
ಈಗಾಗಲೇ ನಾಲ್ಕು ಬಾರಿ ಈ ಅರ್ಜಿ ವಿಚಾರಣೆ ನಡೆಸಿರುವ ಪೀಠ ಇಂದು ನಿರ್ಣಾಯಕ ತಿರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ. ಉಷಾ ಮತ್ತು ಗೌರಮ್ಮ ಅವರ ಮನವಿಗೆ ಒಪ್ಪಿಕೊಂಡಲ್ಲಿ ಬೆಂಗಳೂರಿನಲ್ಲಿ ವಿಚಾರಣೆ ನಡೆಯಲಿದ್ದು, ಹೈ ಕೋರ್ಟ್ ಇವರ ಮನವಿ ತಿರಸ್ಕರಿದಲ್ಲಿ ನಾಳೆ ದೆಹಲಿಯಲ್ಲಿ ಇಡಿ ಅಧಿಕಾರಿಗಳ ಮುಂದೆ ವಿಚಾರಣೆ ಒಳಪಡಬೇಕಿದೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…