Featured

ದೀದಿ ಗೆ ಬಿಗ್ ಶಾಕ್ !! ತೃಣಮೂಲ ಕಾಂಗ್ರೆಸ್ ನ ಇಬ್ಬರು ಶಾಸಕರು, 50 ಕೌನ್ಸಿಲರ್‌ಗಳು ಬಿಜೆಪಿಗೆ -Vishwanews24

ನವದೆಹಲಿ: ತೃಣಮೂಲ ಕಾಂಗ್ರೆಸ್ನ ಇಬ್ಬರು ಶಾಸಕರು ಮತ್ತು 50 ಮಂದಿ ಕೌನ್ಸಿಲರ್ಗಳು ದೆಹಲಿಯಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು. ಈ ಮೂಲಕ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಭಾರೀ ಹಿನ್ನಡೆಯಾಗಿದೆ.

ಇವರೊಂದಿಗೆ 50ಕ್ಕೂ ಹೆಚ್ಚು ಕೌನ್ಸಿಲರ್‌ಗಳು ಕೂಡ ಕಮಲ ಪಾಳಯಕ್ಕೆ ಸೇರಿದರು. ಬಳಿಕ ಸುದ್ದಿಗೋಷ್ಠಿ ನಡೆಸಿದ ಬಿಜೆಪಿಯ ಪಶ್ಚಿಮ ಬಂಗಾಳ ಉಸ್ತುವಾರಿ ಕೈಲಾಶ್‌ ವಿಜಯವರ್ಗಿಯ, ” ಹಿಂದೆಯೇ ಪ್ರಧಾನಿ ಮೋದಿ ತೃಣಮೂಲ ಕಾಂಗ್ರೆಸ್‌ಗೆ ಎಚ್ಚರಿಕೆ ಕೊಟ್ಟಿದ್ದರು. ಅದರಂತೆ ಮಮತಾರನ್ನು ಕಡೆಗಣಿಸಿ ಟಿಎಂಸಿಯ ಹಲವು ಮುಖಂಡರು ಬಿಜೆಪಿಗೆ ಬರುತ್ತಿದ್ದಾರೆ. ಲೋಕಸಭೆ ಚುನಾವಣೆ ಮತದಾನದ ರೀತಿಯಲ್ಲಿ ಏಳು ಹಂತಗಳಲ್ಲಿ ಟಿಎಂಸಿ ಸದಸ್ಯರು ಬಿಜೆಪಿಗೆ ಬರಲಿದ್ದಾರೆ. ಅದರಲ್ಲಿ ಇದು ಮೊದಲ ಹಂತ ಮಾತ್ರ!” ಎಂದು ಹೇಳಿದರು.

ಚುನವಣಾ ಪ್ರಚಾರ ವೇಳೆ ಹೂಗ್ಲಿ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ” ಮೇ 23ರಂದು ಬಂಗಾಳದ ತುಂಬೆಲ್ಲ ಕಮಲ ಅರಳಿದಾಗ, ನಿಮ್ಮ ಶಾಸಕರು ನಿಮ್ಮನ್ನು ಕಡೆಗಣಿಸಿ ಓಡಿಹೋಗುವುದನ್ನು ನೀವು (ದೀದಿ) ಕಾಣುತ್ತೀರಿ. ಈಗಾಗಲೇ ನಿಮ್ಮ 40 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ” ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಎಚ್ಚರಿಕೆ ನೀಡಿದ್ದರು.

ಶಾರದಾ ಚಿಟ್‌ ಫಂಡ್‌ ಹಗರಣ ಸಂಬಂಧ ತಮ್ಮ ಆಪ್ತ ಹಾಗೂ ಕೋಲ್ಕೊತಾ ಪೊಲೀಸ್‌ ಮಾಜಿ ಆಯುಕ್ತ ರಾಜೀವ್‌ ಕುಮಾರ್‌ ಮೇಲೆ ಸಿಬಿಐ ದಾಳಿ ಆದಾಗ, ದೀದಿ ರಸ್ತೆಗಿಳಿದು ಪ್ರಧಾನಿ ಮೋದಿ ವಿರುದ್ಧ ಪ್ರತಿಭಟಿಸಿದ್ದರು. ಚುನಾವಣೆ ವೇಳೆ ಪ್ರಚಾರಕ್ಕಾಗಿ ಬರಲು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಹೆಲಿಕಾಪ್ಟರ್‌ ಇಳಿಸಲು ಅನುಮತಿ ಕೋರಿದಾಗ ದೀದಿ ನಿರಾಕರಿಸಿದ್ದರು.  ಎಂದು ಪ್ರಧಾನಿ ಮೋದಿ ಅವರು ಚುನಾವಣಾ ಪ್ರಚಾರದ ವೇಳೆ ಹೇಳಿದ್ದರು. ಕೌನ್ಸಿಲರ್ ಗಳ ಪಕ್ಷಾಂತರದಿಂದ ಮಮತಾ ಬ್ಯಾನರ್ಜಿಗೆ ಭಾರೀ ಹಿನ್ನೆಡೆ ಉಂಟಾಗಿದೆ ಎನ್ನಲಾಗಿದೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

14 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

17 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

17 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

18 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

18 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

18 hours ago