ಪುರುಲಿಯಾ:ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನನಗೆ ಕಪಾಳ ಮೋಕ್ಷ ಮಾಡಿದರೆ ಅದನ್ನು ಆಶೀರ್ವಾದ ಎಂದುಕೊಳ್ಳುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ತಿರುಗೇಟು ನೀಡಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಚುನಾವಣಾ ರ್ಯಾಲಿಯೊಂದರಲ್ಲಿ ಮಮತ ಬ್ಯಾನರ್ಜಿ ಪ್ರಜಾಪ್ರಭುತ್ವ ಉಳಿಯಬೇಕಾದರೆ ಮೋದಿಗೆ ಕಪಾಳಮೋಕ್ಷ ಮಾಡಬೇಕೆಂದು ಹೇಳಿದ್ದರು. ಇಂದು ಪಶ್ಚಿಮಬಂಗಳಾದ ಪುರುಲಿಯಾದಲ್ಲಿ ಪಕ್ಷದ ಪರ ಬಹಿರಂಗ ಪ್ರಚಾರ ನಡೆಸಿದ ವೇಳೆ ಮಮತ ಬ್ಯಾನರ್ಜಿಯ ಪ್ರತಿಯೊಂದು ಟೀಕೆಗೆ ಬಡ್ಡಿ ಚುಕ್ತ ಮಾಡಿದರು.
ದೀದಿ ಎನ್ನುತ್ತಲೇ ಭಾಷಣ ಆರಂಭಿಸಿದ ಅವರು, ಪ್ರಜಾಪ್ರಭುತ್ವಕ್ಕಾಗಿ ದೀದಿ ಅವರು ನನಗೆ ಕಪಾಳ ಮೋಕ್ಷ ಮಾಡುತ್ತಾರಂತೆ.ಇದರಿಂದ ನನಗೆ ಯಾವ ಬೇಸರವೂ ಇಲ್ಲ. ಹಾಗೊಂದು ವೇಳೆ ಅವರು ಕಪಾಳಮೋಕ್ಷ ಮಾಡಿದರೆ ಅದನ್ನು ಆಶೀರ್ವಾದ ಎಂದುಕೊಳ್ಳುವೆ.
ದೀದಿ ವೋ ದೀದಿ ನಾನು ನಿಮ್ಮನ್ನು ದೀದಿ ಎನ್ನುವೆ. ನಿಮ್ಮ ಬಗ್ಗೆ ನನಗೆ ಅಪಾರವಾದ ಗೌರವವಿದೆ. ನಿಮ್ಮ ಹೇಳಿಕೆಯನ್ನು ಸ್ವೀಕರಿಸುತ್ತೇನೆ. ಆದರೆ ನನ್ನದೊಂದು ಬೇಡಿಕೆ ಇದೆ. ನೀವು ಕಪಾಳಮೋಕ್ಷ ಮಾಡುವ ಮೊದಲು ಶಾರದಾ ಚಿಟ್ ಫಂಡ್ನಲ್ಲಿ ಬಡವರ ಹಣ ತಿಂದುತೇಗಿರುವ ನಿಮ್ಮ ಸಹೋದ್ಯೋಗಿಗಳಿಗೆ ಕಪಾಳಮೋಕ್ಷ ಮಾಡುವ ತಾಕತ್ತು ನಿಮಗಿದೆಯೇ ಎಂದು ಪ್ರಶ್ನಿಸಿದರು.
ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು…
ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…
ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…
ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…
ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ…
ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…