Featured

ದೀಪಾವಳಿಯ ಬಂಪರ್ ಧಮಾಕ : 600 ಉದ್ಯೋಗಿಗಳಿಗೆ ಕಾರ್ ವಿತರಿಸಿದ ಸೂರತ್ ವಜ್ರದ ವ್ಯಾಪಾರಿ

ಸೂರತ್: ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಹಾಗೂ ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಸೂರತ್‌ನ ವಜ್ರದ ವ್ಯಾಪಾರಿಯಾಗಿರುವ ಸಾವ್ಜಿ ಡೋಲಾಕಿಯಾ ಅವರು, ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉದ್ಯೋಗಿಗಳಿಗೆ ದೀಪಾವಳಿ ಪ್ರಯುಕ್ತ ಭರ್ಜರಿ ಉಡುಗೊರೆ ನೀಡಿದ್ದಾರೆ.

ಈತ ತನ್ನ ಕಂಪನಿಯ 600 ಉದ್ಯೋಗಿಗಳಿಗೆ ಈ ವರ್ಷದ ದೀಪಾವಳಿ ಉಡುಗೊರೆಯನ್ನಾಗಿ ಕಾರುಗಳನ್ನು ನೀಡುತ್ತಿದ್ದು, ಇನ್ನಿತರ ಉದ್ಯೋಗಿಗಳಿಗೆ ಫ್ಲ್ಯಾಟ್​ ಮತ್ತು ಆಭರಣಗಳನ್ನು ಗಿಫ್ಟ್​ ಆಗಿ ನೀಡಲಿದ್ದಾರೆ.

ತಮ್ಮ ಕಂಪನಿಯಲ್ಲಿ 25 ವರ್ಷ ಸೇವೆ ಸಲ್ಲಿಸಿದ ಮೂವರು ಉದ್ಯೋಗಿಗಳಿಗೆ ಧೋಲಾಕಿಯಾ ಅವರು ಕಳೆದ ಆಗಸ್ಟ್​ ತಿಂಗಳಲ್ಲಿ 3 ಕೋಟಿ ರೂ. ಮೌಲ್ಯದ ಮೂರು ಮರ್ಸಿಡಿಸ್-ಬೆನ್ಜ್ ಜಿಎಲ್​ಎಸ್​ ಕಾರನ್ನು ಉಡುಗೊರೆಯನ್ನಾಗಿ ನೀಡಿದ್ದರು.

ದೀಪಾವಳಿ ಉಡುಗೊರೆಯಿಂದ ಎಲ್ಲರಿಗೂ ಪರಿಚಿತರಾಗಿರುವ ಪರೋಪಕಾರಿ ಧೋಲಾಕಿಯಾ ಅವರು ಹಿಂದೆ ತನ್ನ ಉದ್ಯೋಗಿಗಳಿಗೆ ತಿಂಗಳ ಕಂತಿನಲ್ಲಿ ಸಾವಿರಾರು ಕಾರು ಹಾಗೂ ಫ್ಲ್ಯಾಟ್​ಗಳನ್ನು ನೀಡಿದ್ದರು.

ದೀಪಾವಳಿಯ ದುಬಾರಿ ಬೋನಸ್​ ಹಾಗೂ ಉಡುಗೊರೆ ಹರೇ ಕೃಷ್ಣ ಎಕ್ಸ್​ಪೋರ್ಟ್ಸ್​ ಕಂಪನಿಯ ವಾರ್ಷಿಕ ಆಚರಣೆಯಾಗಿದೆ.

 

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

14 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

15 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

15 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

18 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

18 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

19 hours ago