ಸೂರತ್: ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಹಾಗೂ ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಸೂರತ್ನ ವಜ್ರದ ವ್ಯಾಪಾರಿಯಾಗಿರುವ ಸಾವ್ಜಿ ಡೋಲಾಕಿಯಾ ಅವರು, ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉದ್ಯೋಗಿಗಳಿಗೆ ದೀಪಾವಳಿ ಪ್ರಯುಕ್ತ ಭರ್ಜರಿ ಉಡುಗೊರೆ ನೀಡಿದ್ದಾರೆ.
ಈತ ತನ್ನ ಕಂಪನಿಯ 600 ಉದ್ಯೋಗಿಗಳಿಗೆ ಈ ವರ್ಷದ ದೀಪಾವಳಿ ಉಡುಗೊರೆಯನ್ನಾಗಿ ಕಾರುಗಳನ್ನು ನೀಡುತ್ತಿದ್ದು, ಇನ್ನಿತರ ಉದ್ಯೋಗಿಗಳಿಗೆ ಫ್ಲ್ಯಾಟ್ ಮತ್ತು ಆಭರಣಗಳನ್ನು ಗಿಫ್ಟ್ ಆಗಿ ನೀಡಲಿದ್ದಾರೆ.
ತಮ್ಮ ಕಂಪನಿಯಲ್ಲಿ 25 ವರ್ಷ ಸೇವೆ ಸಲ್ಲಿಸಿದ ಮೂವರು ಉದ್ಯೋಗಿಗಳಿಗೆ ಧೋಲಾಕಿಯಾ ಅವರು ಕಳೆದ ಆಗಸ್ಟ್ ತಿಂಗಳಲ್ಲಿ 3 ಕೋಟಿ ರೂ. ಮೌಲ್ಯದ ಮೂರು ಮರ್ಸಿಡಿಸ್-ಬೆನ್ಜ್ ಜಿಎಲ್ಎಸ್ ಕಾರನ್ನು ಉಡುಗೊರೆಯನ್ನಾಗಿ ನೀಡಿದ್ದರು.
ದೀಪಾವಳಿ ಉಡುಗೊರೆಯಿಂದ ಎಲ್ಲರಿಗೂ ಪರಿಚಿತರಾಗಿರುವ ಪರೋಪಕಾರಿ ಧೋಲಾಕಿಯಾ ಅವರು ಹಿಂದೆ ತನ್ನ ಉದ್ಯೋಗಿಗಳಿಗೆ ತಿಂಗಳ ಕಂತಿನಲ್ಲಿ ಸಾವಿರಾರು ಕಾರು ಹಾಗೂ ಫ್ಲ್ಯಾಟ್ಗಳನ್ನು ನೀಡಿದ್ದರು.
ದೀಪಾವಳಿಯ ದುಬಾರಿ ಬೋನಸ್ ಹಾಗೂ ಉಡುಗೊರೆ ಹರೇ ಕೃಷ್ಣ ಎಕ್ಸ್ಪೋರ್ಟ್ಸ್ ಕಂಪನಿಯ ವಾರ್ಷಿಕ ಆಚರಣೆಯಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…