ಮಂಗಳೂರು : ಮಂಗಳೂರು ಬೆಂಗಳೂರು ನಡುವೆ ಪ್ರಯಾಣಿಸುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ದೀಪಾವಳಿಗೆ ವಿಶೇಷ ಉಡುಗೊರೆ ನೀಡಿದೆ. ಸಂಸದ ಚೌಟ ಮನವಿ ಮೇರೆಗೆ ಇದೀಗ ದೀಪಾವಳಿ ಹಬ್ಬದ ಸಂದರ್ಭ ಪ್ರಯಾಣಿಕ ದಟ್ಟಣೆ ಸಲುವಾಗಿ ವಿಶೇಷ ರೈಲು ಸಂಚಾರಕ್ಕೆ ನೈರುತ್ಯ ರೈಲ್ವೆ ಎಸ್ ಎಂದಿದೆ.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಮನವಿಗೆ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತುರ್ತು ಸ್ಪಂದಿಸಿದ್ದಾರೆ. ಇದೀಗ ನೈರುತ್ಯ ರೈಲ್ವೆಯು ಮಂಗಳೂರು- ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ ಪ್ರಕಟಿಸಿದೆ. ಯಶವಂತಪುರ- ಮಂಗಳೂರು (06565) ವಿಶೇಷ ರೈಲು ಅ.30ರಂದು ರಾತ್ರಿ 11.50ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 11.45ಕ್ಕೆ ಮಂಗಳೂರು ತಲುಪಲಿದೆ. ಹಾಗೆಯೇ ಮಂಗಳೂರು- ಯಶವಂತಪುರ (ನಂ. 06566) ವಿಶೇಷ ರೈಲು ಮಂಗಳೂರಿನಿಂದ ಅ.31ರಂದು ಮಧ್ಯಾಹ್ನ 1 ಗಂಟೆಗೆ ಹೊರಟು ಅದೇ ದಿನ ರಾತ್ರಿ 9.15ಕ್ಕೆ ಯಶವಂತಪುರ ತಲುಪಲಿದೆ.
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಭಾಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರು-ಮಂಗಳೂರು ನಡುವೆ ಸಂಚರಿಸುತ್ತಾರೆ. ಆದರೆ, ಹಬ್ಬದ ಸೀಸನ್ನಲ್ಲಿ ಈಗಾಗಲೇ ಪ್ರಯಾಣಿಕರ ದಟ್ಟಣೆ ಜಾಸ್ತಿಯಾಗಿ ಬಸ್ ಗಳಲ್ಲಿ ಟಿಕೆಟ್ ಲಭ್ಯವಾಗದ ಹಲವರು ಊರಿಗೆ ಬರುವುದಕ್ಕೆ ಸಾಧ್ಯವಾಗದೆ ತೊಂದರೆಗೆ ಸಿಲುಕುತ್ತಾರೆ. ಹೀಗಾಗಿ, ದೀಪಾವಳಿ ಹಬ್ಬಕ್ಕೆ ಕರಾವಳಿ ಭಾಗದ ಜನರಿಗೆ ಅನುಕೂಲವಾಗುವಂತೆ ವಿಶೇಷ ರೈಲು ಸಂಚಾರದ ವ್ಯವಸ್ಥೆ ಮಾಡುವಂತೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನೈಋತ್ಯ ರೈಲ್ವೆ ವಲಯಕ್ಕೆ ಹಾಗೂ ರೈಲ್ವೆ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದರು.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…