Featured

ದೀಪಾವಳಿ ಸಂದರ್ಭದಲ್ಲಿ ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡಿದರೆ ಪರವಾನಗಿ ರದ್ದು : ಶ್ರೀರಾಮುಲು ಖಡಕ್ ಎಚ್ಚರಿಕೆ – Vishwanews24

ದೀಪಾವಳಿ ಸಂದರ್ಭದಲ್ಲಿ ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡಿದರೆ ಪರವಾನಗಿ ರದ್ದು : ಶ್ರೀರಾಮುಲು ಖಡಕ್ ಎಚ್ಚರಿಕೆ

ಯಾದಗಿರಿ: ದೀಪಾವಳಿ ಸಂದರ್ಭದಲ್ಲಿ ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುವ ಖಾಸಗಿ ಬಸ್‌ಗಳ ಮಾಲಕರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ ಬಸ್ ಪರವಾನಗಿ ರದ್ದು ಮಾಡಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಯಾದಗಿರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ದೂರದೂರುಗಳಲ್ಲಿರುವವರು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ತಮ್ಮ ತಮ್ಮ ಊರುಗಳಿಗೆ ಹೋಗಲು ಸಿದ್ದತೆ ನಡೆಸುತ್ತಿದ್ದಾರೆ. ಇಂತಹ ಸಂದರ್ಭಗಳಲ್ಲಿ ಖಾಸಗಿ ಬಸ್‌ಗಳಲ್ಲಿ ಪ್ರಯಾಣ ದರವನ್ನು ಏಕಾಏಕಿ ಏರಿಕೆ ಮಾಡಿ, ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುವುದಕ್ಕೆ ಬಸ್ ಮಾಲಕರು ಮುಂದಾದಲ್ಲಿ ಅಂತಹವರ ವಿರುದ್ದ ಕ್ರಮ ಅನಿವಾರ್ಯ. ಇದಕ್ಕಾಗಿ ಟಾಸ್ಕ್ ಪೋರ್ಸ್ ರಚನೆ ಮಾಡಲಾಗುತ್ತದೆ. ಅಲ್ಲದೆ ಚೆಕ್‌ಪೋಸ್ಟ್‌ಗಳನ್ನು ಹೆಚ್ಚಿಸಿ ಬಸ್‌ಗಳಲ್ಲಿ ಪರಿಶೀಲನೆ ಕಾರ್ಯ ನಡೆಯಲಿದೆ ಎಂದರು.

ಸಂಸ್ಕೃತಿ ಬಗ್ಗೆ ಮಾತಾಡುವಷ್ಟು ಅರ್ಹತೆ ನನಗೆ ಇಲ್ಲ.. ನಾನು ಯಾರಿಗೂ ಉತ್ತರ ಕೊಡಬೇಕಾಗಿಲ್ಲ’:ರಿಷಬ್ ಶೆಟ್ಟಿ – Vishwanews24

ಈಗಾಗಲೇ ದೀಪಾವಳಿ ಸಂದರ್ಭದಲ್ಲಿ ಬಸ್ ಟಿಕೆಟ್ ದರ ಏರಿಸಿ ಹಲವು ಖಾಸಗಿ ಬಸ್‌ಗಳು ದುಪ್ಪಟ್ಟು ಹಣ ವಸೂಲಿಗಿಳಿದುವುದು ಗೊತ್ತಾಗಿದೆ. ಬೆಂಗಳೂರು-ಬಳ್ಳಾರಿ ನಡುವಿನ ಸಂಚಾರಕ್ಕೆ 1000 ರೂ-1500 ರೂ. ವರೆಗೆನಿಗದಿ ಮಾಡಿದ್ದಾರೆ. ಇನ್ನು ಅಕ್ಟೋಬರ್ 21ರಿಂದ ಬೆಂಗಳೂರು-ಹುಬ್ಬಳ್ಳಿ ನಡುವೆ ಸಂಚಾರಕ್ಕಾಗಿ ಖಾಸಗಿ ಟ್ರಾವೆಲ್ಸ್‌ವೊಂದು 5,000 ರೂ. ದರ ನಿಗದಿಗೊಳಿಸಿದೆ. ಹಲವಾರು ಬಾರಿ ಎಚ್ಚರಿಕೆ ನೀಡಿದ್ದರೂ ಬಸ್ ಮಾಲಕರು ಕ್ಯಾರೇ ಎನ್ನದೆ ಬಸ್ ದರವನ್ನು ಏರಿಕೆ ಮಾಡುತ್ತಿದ್ದಾರೆ ಎಂದವರು ಆಕ್ರೋಶ ವ್ಯಕ್ತಪಡಿಸಿದರು.

ದೀಪಾವಳಿ ಸೇರಿದಂತೆ ಹಬ್ಬ ಹರಿದಿನಗಳಲ್ಲಿ ಸರ್ಕಾರಿಯಾಗಲೀ, ಖಾಸಗಿಯಾಗಲೀ ಯಾವುದೇ ಬಸ್‌ಗಳ ಟಿಕೆಟ್ ದರ ಏರಿಕೆ ಮಾಡುವಂತಿಲ್ಲ. ಯಥಾಸ್ಥಿತಿಯಲ್ಲೇ ದರ ಇರಬೇಕು. ಹೆಚ್ಚುವರಿ ವಸೂಲಿ ಮಾಡಿದರೆ ಅಂತಹವರ ಪರವಾನಗಿ ರದ್ದು ಮಾಡಲಾಗುವುದು ಎಂದು ಸೂಚಿಸಿದರು.

ಮಲ್ಪೆ: ತಮ್ಮ ಮನೆಯವರು ಕಾಯಿಲೆಗೆ ತುತ್ತಾಗಿದ್ದಾರೆಂದು ನಂಬಿಸಿ ಜನರಿಂದ ದುಡ್ಡು ಪಡೆಯುವ ವಂಚಕರ ತಂಡ ಕರಾವಳಿಯಲ್ಲಿ ಸಕ್ರಿಯ – ಎಚ್ಚರ – Vishwanews24

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago