Featured

ದೀಪಾವಳಿ ಸಂದರ್ಭದಲ್ಲಿ ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡಿದರೆ ಪರವಾನಗಿ ರದ್ದು : ಶ್ರೀರಾಮುಲು ಖಡಕ್ ಎಚ್ಚರಿಕೆ – Vishwanews24

ದೀಪಾವಳಿ ಸಂದರ್ಭದಲ್ಲಿ ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡಿದರೆ ಪರವಾನಗಿ ರದ್ದು : ಶ್ರೀರಾಮುಲು ಖಡಕ್ ಎಚ್ಚರಿಕೆ

ಯಾದಗಿರಿ: ದೀಪಾವಳಿ ಸಂದರ್ಭದಲ್ಲಿ ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುವ ಖಾಸಗಿ ಬಸ್‌ಗಳ ಮಾಲಕರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ ಬಸ್ ಪರವಾನಗಿ ರದ್ದು ಮಾಡಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಯಾದಗಿರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ದೂರದೂರುಗಳಲ್ಲಿರುವವರು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ತಮ್ಮ ತಮ್ಮ ಊರುಗಳಿಗೆ ಹೋಗಲು ಸಿದ್ದತೆ ನಡೆಸುತ್ತಿದ್ದಾರೆ. ಇಂತಹ ಸಂದರ್ಭಗಳಲ್ಲಿ ಖಾಸಗಿ ಬಸ್‌ಗಳಲ್ಲಿ ಪ್ರಯಾಣ ದರವನ್ನು ಏಕಾಏಕಿ ಏರಿಕೆ ಮಾಡಿ, ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುವುದಕ್ಕೆ ಬಸ್ ಮಾಲಕರು ಮುಂದಾದಲ್ಲಿ ಅಂತಹವರ ವಿರುದ್ದ ಕ್ರಮ ಅನಿವಾರ್ಯ. ಇದಕ್ಕಾಗಿ ಟಾಸ್ಕ್ ಪೋರ್ಸ್ ರಚನೆ ಮಾಡಲಾಗುತ್ತದೆ. ಅಲ್ಲದೆ ಚೆಕ್‌ಪೋಸ್ಟ್‌ಗಳನ್ನು ಹೆಚ್ಚಿಸಿ ಬಸ್‌ಗಳಲ್ಲಿ ಪರಿಶೀಲನೆ ಕಾರ್ಯ ನಡೆಯಲಿದೆ ಎಂದರು.

ಸಂಸ್ಕೃತಿ ಬಗ್ಗೆ ಮಾತಾಡುವಷ್ಟು ಅರ್ಹತೆ ನನಗೆ ಇಲ್ಲ.. ನಾನು ಯಾರಿಗೂ ಉತ್ತರ ಕೊಡಬೇಕಾಗಿಲ್ಲ’:ರಿಷಬ್ ಶೆಟ್ಟಿ – Vishwanews24

ಈಗಾಗಲೇ ದೀಪಾವಳಿ ಸಂದರ್ಭದಲ್ಲಿ ಬಸ್ ಟಿಕೆಟ್ ದರ ಏರಿಸಿ ಹಲವು ಖಾಸಗಿ ಬಸ್‌ಗಳು ದುಪ್ಪಟ್ಟು ಹಣ ವಸೂಲಿಗಿಳಿದುವುದು ಗೊತ್ತಾಗಿದೆ. ಬೆಂಗಳೂರು-ಬಳ್ಳಾರಿ ನಡುವಿನ ಸಂಚಾರಕ್ಕೆ 1000 ರೂ-1500 ರೂ. ವರೆಗೆನಿಗದಿ ಮಾಡಿದ್ದಾರೆ. ಇನ್ನು ಅಕ್ಟೋಬರ್ 21ರಿಂದ ಬೆಂಗಳೂರು-ಹುಬ್ಬಳ್ಳಿ ನಡುವೆ ಸಂಚಾರಕ್ಕಾಗಿ ಖಾಸಗಿ ಟ್ರಾವೆಲ್ಸ್‌ವೊಂದು 5,000 ರೂ. ದರ ನಿಗದಿಗೊಳಿಸಿದೆ. ಹಲವಾರು ಬಾರಿ ಎಚ್ಚರಿಕೆ ನೀಡಿದ್ದರೂ ಬಸ್ ಮಾಲಕರು ಕ್ಯಾರೇ ಎನ್ನದೆ ಬಸ್ ದರವನ್ನು ಏರಿಕೆ ಮಾಡುತ್ತಿದ್ದಾರೆ ಎಂದವರು ಆಕ್ರೋಶ ವ್ಯಕ್ತಪಡಿಸಿದರು.

ದೀಪಾವಳಿ ಸೇರಿದಂತೆ ಹಬ್ಬ ಹರಿದಿನಗಳಲ್ಲಿ ಸರ್ಕಾರಿಯಾಗಲೀ, ಖಾಸಗಿಯಾಗಲೀ ಯಾವುದೇ ಬಸ್‌ಗಳ ಟಿಕೆಟ್ ದರ ಏರಿಕೆ ಮಾಡುವಂತಿಲ್ಲ. ಯಥಾಸ್ಥಿತಿಯಲ್ಲೇ ದರ ಇರಬೇಕು. ಹೆಚ್ಚುವರಿ ವಸೂಲಿ ಮಾಡಿದರೆ ಅಂತಹವರ ಪರವಾನಗಿ ರದ್ದು ಮಾಡಲಾಗುವುದು ಎಂದು ಸೂಚಿಸಿದರು.

ಮಲ್ಪೆ: ತಮ್ಮ ಮನೆಯವರು ಕಾಯಿಲೆಗೆ ತುತ್ತಾಗಿದ್ದಾರೆಂದು ನಂಬಿಸಿ ಜನರಿಂದ ದುಡ್ಡು ಪಡೆಯುವ ವಂಚಕರ ತಂಡ ಕರಾವಳಿಯಲ್ಲಿ ಸಕ್ರಿಯ – ಎಚ್ಚರ – Vishwanews24

 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

6 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

6 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

6 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

6 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago