ಯಾದಗಿರಿ: ದೀಪಾವಳಿ ಸಂದರ್ಭದಲ್ಲಿ ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುವ ಖಾಸಗಿ ಬಸ್ಗಳ ಮಾಲಕರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ ಬಸ್ ಪರವಾನಗಿ ರದ್ದು ಮಾಡಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಯಾದಗಿರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ದೂರದೂರುಗಳಲ್ಲಿರುವವರು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ತಮ್ಮ ತಮ್ಮ ಊರುಗಳಿಗೆ ಹೋಗಲು ಸಿದ್ದತೆ ನಡೆಸುತ್ತಿದ್ದಾರೆ. ಇಂತಹ ಸಂದರ್ಭಗಳಲ್ಲಿ ಖಾಸಗಿ ಬಸ್ಗಳಲ್ಲಿ ಪ್ರಯಾಣ ದರವನ್ನು ಏಕಾಏಕಿ ಏರಿಕೆ ಮಾಡಿ, ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುವುದಕ್ಕೆ ಬಸ್ ಮಾಲಕರು ಮುಂದಾದಲ್ಲಿ ಅಂತಹವರ ವಿರುದ್ದ ಕ್ರಮ ಅನಿವಾರ್ಯ. ಇದಕ್ಕಾಗಿ ಟಾಸ್ಕ್ ಪೋರ್ಸ್ ರಚನೆ ಮಾಡಲಾಗುತ್ತದೆ. ಅಲ್ಲದೆ ಚೆಕ್ಪೋಸ್ಟ್ಗಳನ್ನು ಹೆಚ್ಚಿಸಿ ಬಸ್ಗಳಲ್ಲಿ ಪರಿಶೀಲನೆ ಕಾರ್ಯ ನಡೆಯಲಿದೆ ಎಂದರು.
ಈಗಾಗಲೇ ದೀಪಾವಳಿ ಸಂದರ್ಭದಲ್ಲಿ ಬಸ್ ಟಿಕೆಟ್ ದರ ಏರಿಸಿ ಹಲವು ಖಾಸಗಿ ಬಸ್ಗಳು ದುಪ್ಪಟ್ಟು ಹಣ ವಸೂಲಿಗಿಳಿದುವುದು ಗೊತ್ತಾಗಿದೆ. ಬೆಂಗಳೂರು-ಬಳ್ಳಾರಿ ನಡುವಿನ ಸಂಚಾರಕ್ಕೆ 1000 ರೂ-1500 ರೂ. ವರೆಗೆನಿಗದಿ ಮಾಡಿದ್ದಾರೆ. ಇನ್ನು ಅಕ್ಟೋಬರ್ 21ರಿಂದ ಬೆಂಗಳೂರು-ಹುಬ್ಬಳ್ಳಿ ನಡುವೆ ಸಂಚಾರಕ್ಕಾಗಿ ಖಾಸಗಿ ಟ್ರಾವೆಲ್ಸ್ವೊಂದು 5,000 ರೂ. ದರ ನಿಗದಿಗೊಳಿಸಿದೆ. ಹಲವಾರು ಬಾರಿ ಎಚ್ಚರಿಕೆ ನೀಡಿದ್ದರೂ ಬಸ್ ಮಾಲಕರು ಕ್ಯಾರೇ ಎನ್ನದೆ ಬಸ್ ದರವನ್ನು ಏರಿಕೆ ಮಾಡುತ್ತಿದ್ದಾರೆ ಎಂದವರು ಆಕ್ರೋಶ ವ್ಯಕ್ತಪಡಿಸಿದರು.
ದೀಪಾವಳಿ ಸೇರಿದಂತೆ ಹಬ್ಬ ಹರಿದಿನಗಳಲ್ಲಿ ಸರ್ಕಾರಿಯಾಗಲೀ, ಖಾಸಗಿಯಾಗಲೀ ಯಾವುದೇ ಬಸ್ಗಳ ಟಿಕೆಟ್ ದರ ಏರಿಕೆ ಮಾಡುವಂತಿಲ್ಲ. ಯಥಾಸ್ಥಿತಿಯಲ್ಲೇ ದರ ಇರಬೇಕು. ಹೆಚ್ಚುವರಿ ವಸೂಲಿ ಮಾಡಿದರೆ ಅಂತಹವರ ಪರವಾನಗಿ ರದ್ದು ಮಾಡಲಾಗುವುದು ಎಂದು ಸೂಚಿಸಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…