ನವದೆಹಲಿ : “ವಾಯು ಮಾಲಿನ್ಯವನ್ನು ಗಮನದಲ್ಲಿರಿಸಿಕೊಂಡು ದೀಪಾವಳಿ ಸಂದರ್ಭದಲ್ಲಿ ಈ ವರ್ಷವೂ ಪಟಾಕಿ ಹಚ್ಚುವುದಕ್ಕೆ ನಿರ್ಬಂಧ ಹೇರಲಾಗಿದೆ” ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ದೆಹಲಿಯ ವಾಯು ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಈ ವರ್ಷವೂ ಪಟಾಕಿ ಹಚ್ಚುವುದಕ್ಕೆ ನಿಷೇಧ ಹೇರಲಾಗಿದೆ. ಕಳೆದ ವರ್ಷದಂತೆ ಈ ವರ್ಷವೂ ಪಟಾಕಿಗಳ ಶೇಖರಣೆ, ಮಾರಾಟ ಹಾಗೂ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗುವುದು” ಎಂದಿದ್ದಾರೆ.
“ದೆಹಲಿಯಲ್ಲಿ ವಾಯು ಮಾಲಿನ್ಯದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಹಿನ್ನೆಲೆ ಕಳೆದ 3 ವರ್ಷಗಳಿಂದ ದೀಪಾವಳಿ ಸಮಯದಲ್ಲಿ ಪಟಾಕಿ ಹಚ್ಚುವುದನ್ನು ನಿರ್ಬಂಧಿಸಲಾಗಿತ್ತು” ಎಂದು ತಿಳಿಸಿದ್ದಾರೆ.
“ಕಳೆದ ವರ್ಷದಂತೆ ಈ ಬಾರಿಯೂ ದೀಪಾವಳಿ ಸಂದರ್ಭ ಪಟಾಕಿ ಹಚ್ಚುವುದನ್ನು ನಿಷೇಧಿಸಲಾಗಿದೆ. ಇದರಿಂದ ಜನರ ಜೀವನವನ್ನು ಕಾಪಾಡಬಹುದು” ಎಂದಿದ್ದಾರೆ.
“ಕಳೆದ ವರ್ಷ ವ್ಯಾಪಾರಿಗಳನ್ನು ಸಂಗ್ರಹಿಸಿದ ಬಳಿಕ ಮಾಲಿನ್ಯದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಸಂಪೂರ್ಣ ನಿಷೇಧ ಹೇರಲಾಗಿತ್ತು. ಇದರಿಂದ ವ್ಯಾಪಾರಿಗಳಿಗೆ ನಷ್ಟವಾಗಿತ್ತು. ಆದರೆ, ಈ ಬಾರಿ ಸಂಪೂರ್ಣ ನಿಷೇಧದ ದೃಷ್ಟಿಯಿಂದ ಯಾರೂ ಕೂಡಾ ಶೇಖರಣೆ ಮಾಡುವಂತಿಲ್ಲ” ಎಂದು ಹೇಳಿದ್ದಾರೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]