ನವದೆಹಲಿ : “ವಾಯು ಮಾಲಿನ್ಯವನ್ನು ಗಮನದಲ್ಲಿರಿಸಿಕೊಂಡು ದೀಪಾವಳಿ ಸಂದರ್ಭದಲ್ಲಿ ಈ ವರ್ಷವೂ ಪಟಾಕಿ ಹಚ್ಚುವುದಕ್ಕೆ ನಿರ್ಬಂಧ ಹೇರಲಾಗಿದೆ” ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ದೆಹಲಿಯ ವಾಯು ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಈ ವರ್ಷವೂ ಪಟಾಕಿ ಹಚ್ಚುವುದಕ್ಕೆ ನಿಷೇಧ ಹೇರಲಾಗಿದೆ. ಕಳೆದ ವರ್ಷದಂತೆ ಈ ವರ್ಷವೂ ಪಟಾಕಿಗಳ ಶೇಖರಣೆ, ಮಾರಾಟ ಹಾಗೂ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗುವುದು” ಎಂದಿದ್ದಾರೆ.
“ದೆಹಲಿಯಲ್ಲಿ ವಾಯು ಮಾಲಿನ್ಯದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಹಿನ್ನೆಲೆ ಕಳೆದ 3 ವರ್ಷಗಳಿಂದ ದೀಪಾವಳಿ ಸಮಯದಲ್ಲಿ ಪಟಾಕಿ ಹಚ್ಚುವುದನ್ನು ನಿರ್ಬಂಧಿಸಲಾಗಿತ್ತು” ಎಂದು ತಿಳಿಸಿದ್ದಾರೆ.
“ಕಳೆದ ವರ್ಷದಂತೆ ಈ ಬಾರಿಯೂ ದೀಪಾವಳಿ ಸಂದರ್ಭ ಪಟಾಕಿ ಹಚ್ಚುವುದನ್ನು ನಿಷೇಧಿಸಲಾಗಿದೆ. ಇದರಿಂದ ಜನರ ಜೀವನವನ್ನು ಕಾಪಾಡಬಹುದು” ಎಂದಿದ್ದಾರೆ.
“ಕಳೆದ ವರ್ಷ ವ್ಯಾಪಾರಿಗಳನ್ನು ಸಂಗ್ರಹಿಸಿದ ಬಳಿಕ ಮಾಲಿನ್ಯದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಸಂಪೂರ್ಣ ನಿಷೇಧ ಹೇರಲಾಗಿತ್ತು. ಇದರಿಂದ ವ್ಯಾಪಾರಿಗಳಿಗೆ ನಷ್ಟವಾಗಿತ್ತು. ಆದರೆ, ಈ ಬಾರಿ ಸಂಪೂರ್ಣ ನಿಷೇಧದ ದೃಷ್ಟಿಯಿಂದ ಯಾರೂ ಕೂಡಾ ಶೇಖರಣೆ ಮಾಡುವಂತಿಲ್ಲ” ಎಂದು ಹೇಳಿದ್ದಾರೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…