ನವದೆಹಲಿ : “ವಾಯು ಮಾಲಿನ್ಯವನ್ನು ಗಮನದಲ್ಲಿರಿಸಿಕೊಂಡು ದೀಪಾವಳಿ ಸಂದರ್ಭದಲ್ಲಿ ಈ ವರ್ಷವೂ ಪಟಾಕಿ ಹಚ್ಚುವುದಕ್ಕೆ ನಿರ್ಬಂಧ ಹೇರಲಾಗಿದೆ” ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ದೆಹಲಿಯ ವಾಯು ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಈ ವರ್ಷವೂ ಪಟಾಕಿ ಹಚ್ಚುವುದಕ್ಕೆ ನಿಷೇಧ ಹೇರಲಾಗಿದೆ. ಕಳೆದ ವರ್ಷದಂತೆ ಈ ವರ್ಷವೂ ಪಟಾಕಿಗಳ ಶೇಖರಣೆ, ಮಾರಾಟ ಹಾಗೂ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗುವುದು” ಎಂದಿದ್ದಾರೆ.
“ದೆಹಲಿಯಲ್ಲಿ ವಾಯು ಮಾಲಿನ್ಯದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಹಿನ್ನೆಲೆ ಕಳೆದ 3 ವರ್ಷಗಳಿಂದ ದೀಪಾವಳಿ ಸಮಯದಲ್ಲಿ ಪಟಾಕಿ ಹಚ್ಚುವುದನ್ನು ನಿರ್ಬಂಧಿಸಲಾಗಿತ್ತು” ಎಂದು ತಿಳಿಸಿದ್ದಾರೆ.
“ಕಳೆದ ವರ್ಷದಂತೆ ಈ ಬಾರಿಯೂ ದೀಪಾವಳಿ ಸಂದರ್ಭ ಪಟಾಕಿ ಹಚ್ಚುವುದನ್ನು ನಿಷೇಧಿಸಲಾಗಿದೆ. ಇದರಿಂದ ಜನರ ಜೀವನವನ್ನು ಕಾಪಾಡಬಹುದು” ಎಂದಿದ್ದಾರೆ.
“ಕಳೆದ ವರ್ಷ ವ್ಯಾಪಾರಿಗಳನ್ನು ಸಂಗ್ರಹಿಸಿದ ಬಳಿಕ ಮಾಲಿನ್ಯದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಸಂಪೂರ್ಣ ನಿಷೇಧ ಹೇರಲಾಗಿತ್ತು. ಇದರಿಂದ ವ್ಯಾಪಾರಿಗಳಿಗೆ ನಷ್ಟವಾಗಿತ್ತು. ಆದರೆ, ಈ ಬಾರಿ ಸಂಪೂರ್ಣ ನಿಷೇಧದ ದೃಷ್ಟಿಯಿಂದ ಯಾರೂ ಕೂಡಾ ಶೇಖರಣೆ ಮಾಡುವಂತಿಲ್ಲ” ಎಂದು ಹೇಳಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…