ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಕೆಲ ಖಾಸಗಿ ಬಸ್ ಕಂಪನಿಗಳು ಏಕಾಏಕಿ ಟಿಕೆಟ್ ದರ ಹೆಚ್ಚಿಸಿ ಪ್ರಯಾಣಿರಿಗೆ ಶಾಕ್ ನೀಡಿದೆ. ಇದನ್ನ ಮನಗೊಂಡ ಸಾರಿಗೆ ಇಲಾಖೆ ಖಾಸಗಿ ಸಾರಿಗೆ ಕಂಪನಿಗಳಿಗೆ ಎಚ್ಚರಿಕೆ ನೀಡಿದೆ.
ಹಬ್ಬದ ಹಿಂದಿನ ದಿನ ಖಾಸಗಿ ಬಸ್ಗಳ ಸೀಟ್ಗಳೆಲ್ಲಾ ಬಹುತೇಕ ಪುಲ್ ಆಗಿವೆ. ಕೆಲ ಬಸ್ಸಿನಲ್ಲಿ ಬೆರಳೆಣಿಕೆಯಷ್ಟು ಸೀಟುಗಳು ಮಾತ್ರ ಉಳಿದಿವೆ. ಇದರಿಂದಾಗಿ ಹಬ್ಬಕ್ಕೆ ಊರಿಗೆ ಹೊರಡುವ ಪ್ರಯಾಣಿಕರು ಪರದಾಡುವಂತಾಗಿದೆ.
ನವೆಂಬರ್ 1 ಕನ್ನಡ ರಾಜ್ಯೋತ್ಸವ, 2 ಶನಿವಾರ ಹಾಗೂ 3 ರಂದು ಭಾನುವಾರ ಆಗಿರುವುದರಿಂದ ಮೂರು ದಿನ ಹಬ್ಬ ಹಾಗೂ ರಜೆ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಊರುಗಳತ್ತ ಮುಖ ಮಾಡಿದ್ದಾರೆ. ಪ್ರಯಾಣಿಕರ ಬೇಡಿಕೆ ಬರುವ ಸಾಧ್ಯತೆ ಇರುವುದರಿಂದ ಖಾಸಗಿ ಬಸ್ಗಳು ಹಬ್ಬ ಸಮೀಪದ ದಿನಗಳಲ್ಲಿ ಟಿಕೆಟ್ ದರ ದುಪ್ಪಟ್ಟು ಮಾಡುವ ಸಾಧ್ಯತೆ ಇದ್ದು, ಹೀಗಾಗಿ ಖಾಸಗಿ ಬಸ್ಗಳಿಗೆ ಸಾರಿಗೆ ಇಲಾಖೆ ಖಡಕ್ ಎಚ್ಚರಿಕೆ ಕೊಟ್ಟಿದೆ.
ಇಂದಿನಿಂದಲೇ ಹಬ್ಬದವರೆಗೂ ವಿಶೇಷ ತನಿಖಾ ತಂಡಗಳನ್ನು ರಚಿಸಿ, ರಾಜ್ಯಾದ್ಯಂತ ಬಸ್ಗಳ ತಪಾಸಣೆ ನಡೆಸಲಿದೆ. ಜೊತೆಗೆ ದರ ಏರಿಕೆ ಮಾಡಿದ ಬಸ್ಗಳ ನೋಂದಣಿ ಅಮಾನತು ಮಾಡಲು ಮುಂದಾಗಿದೆ ಎಂದು ಅಪರ ಸಾರಿಗೆ ಆಯುಕ್ತ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…