ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಕೆಲ ಖಾಸಗಿ ಬಸ್ ಕಂಪನಿಗಳು ಏಕಾಏಕಿ ಟಿಕೆಟ್ ದರ ಹೆಚ್ಚಿಸಿ ಪ್ರಯಾಣಿರಿಗೆ ಶಾಕ್ ನೀಡಿದೆ. ಇದನ್ನ ಮನಗೊಂಡ ಸಾರಿಗೆ ಇಲಾಖೆ ಖಾಸಗಿ ಸಾರಿಗೆ ಕಂಪನಿಗಳಿಗೆ ಎಚ್ಚರಿಕೆ ನೀಡಿದೆ.
ಹಬ್ಬದ ಹಿಂದಿನ ದಿನ ಖಾಸಗಿ ಬಸ್ಗಳ ಸೀಟ್ಗಳೆಲ್ಲಾ ಬಹುತೇಕ ಪುಲ್ ಆಗಿವೆ. ಕೆಲ ಬಸ್ಸಿನಲ್ಲಿ ಬೆರಳೆಣಿಕೆಯಷ್ಟು ಸೀಟುಗಳು ಮಾತ್ರ ಉಳಿದಿವೆ. ಇದರಿಂದಾಗಿ ಹಬ್ಬಕ್ಕೆ ಊರಿಗೆ ಹೊರಡುವ ಪ್ರಯಾಣಿಕರು ಪರದಾಡುವಂತಾಗಿದೆ.
ನವೆಂಬರ್ 1 ಕನ್ನಡ ರಾಜ್ಯೋತ್ಸವ, 2 ಶನಿವಾರ ಹಾಗೂ 3 ರಂದು ಭಾನುವಾರ ಆಗಿರುವುದರಿಂದ ಮೂರು ದಿನ ಹಬ್ಬ ಹಾಗೂ ರಜೆ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಊರುಗಳತ್ತ ಮುಖ ಮಾಡಿದ್ದಾರೆ. ಪ್ರಯಾಣಿಕರ ಬೇಡಿಕೆ ಬರುವ ಸಾಧ್ಯತೆ ಇರುವುದರಿಂದ ಖಾಸಗಿ ಬಸ್ಗಳು ಹಬ್ಬ ಸಮೀಪದ ದಿನಗಳಲ್ಲಿ ಟಿಕೆಟ್ ದರ ದುಪ್ಪಟ್ಟು ಮಾಡುವ ಸಾಧ್ಯತೆ ಇದ್ದು, ಹೀಗಾಗಿ ಖಾಸಗಿ ಬಸ್ಗಳಿಗೆ ಸಾರಿಗೆ ಇಲಾಖೆ ಖಡಕ್ ಎಚ್ಚರಿಕೆ ಕೊಟ್ಟಿದೆ.
ಇಂದಿನಿಂದಲೇ ಹಬ್ಬದವರೆಗೂ ವಿಶೇಷ ತನಿಖಾ ತಂಡಗಳನ್ನು ರಚಿಸಿ, ರಾಜ್ಯಾದ್ಯಂತ ಬಸ್ಗಳ ತಪಾಸಣೆ ನಡೆಸಲಿದೆ. ಜೊತೆಗೆ ದರ ಏರಿಕೆ ಮಾಡಿದ ಬಸ್ಗಳ ನೋಂದಣಿ ಅಮಾನತು ಮಾಡಲು ಮುಂದಾಗಿದೆ ಎಂದು ಅಪರ ಸಾರಿಗೆ ಆಯುಕ್ತ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…