ದೀಪ ಹಚ್ಚಿ ಎಂದಾಗ ಹಚ್ವಿದೆವು, ಗಂಟೆ ಬಾರಿಸಿ ಎಂದಾಗ ಬಾರಿಸಿದೆವು , ಆದರೆ ಇನ್ನು ಮುಂದೆ ಸರ್ಕಾರ ಕೊರೊನಾ ನಿಯಂತ್ರಣದ ಹೆಸರಲ್ಲಿ ಲೂಟಿ ಹೊಡೆಯಲು ಬಿಡುವುದಿಲ್ಲ : ಡಿ.ಕೆ.ಶಿವಕುಮಾರ್ -Vishwanews24

ಬಳ್ಳಾರಿ: ದೀಪ ಹಚ್ಚಿ ಎಂದಾಗ ಹಚ್ವಿದೆವು, ಗಂಟೆ ಬಾರಿಸಿ ಎಂದಾಗ ಬಾರಿಸಿದೆವು, ಇನ್ನುಮುಂದೆ ನಾವು ಸುಮ್ಮನೆ ಕೂರುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹರಿಹಾಯ್ದರು.

ಬಳ್ಳಾರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾರ್ಚ್ ತಿಂಗಳಿಂದ ರಾಜ್ಯ ಹಾಗೂ ರಾಷ್ಟ್ರ ಕೊರೊನಾ ಸಂಕಷ್ಟದ ನೋವಿನಿಂದ ಬಳಲುತ್ತಿದೆ. ಕೇಂದ್ರ ಸರ್ಕಾರ ಗಂಟೆ ಬಾರಿಸಿ, ದೀಪ ಹಚ್ಚಿ ಎಂದು ಹೇಳಿದ ಹಾಗೆ ನಾವು ಕುಣಿದಿದ್ದೂ ಆಗಿದೆ. ಆದರೆ ಇನ್ನು ಮುಂದೆ ಸರ್ಕಾರ ಕೊರೊನಾ ನಿಯಂತ್ರಣದ ಹೆಸರಲ್ಲಿ ಲೂಟಿ ಹೊಡೆಯಲು ಬಿಡುವುದಿಲ್ಲ ಎಂದು ತಿವಿದರು.

ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ವಿಫಲವಾಗಿದೆ. ಸರ್ಕಾರದ ಬ್ರೇಕ್ ಫೇಲ್ ಆಗಿದೆ. ರಾಜ್ಯದಲ್ಲಿ ಸೋಂಕಿತ ಗೋಳಿನ ಕಥೆಯನ್ನು ಸಾಕಷ್ಟು ಸಿನಿಮಾ ತೆಗೆಯಬಹುದು ಅಷ್ಟು ಜನ ನರಳುತಿದ್ದಾರೆ. ಒಬ್ಬ ಮಾಜಿ ಮಂತ್ರಿ ಕೋವಿಡ್-19 ಆಸ್ಪತ್ರೆ ಬಿಲ್ 17 ಲಕ್ಷ ರೂ. ಆಗಿದೆ. ಹೀಗಿರುವಾಗ ಬಡವರ ಪರಿಸ್ಥಿತಿ ಹೇಗೆ ಎಂದು ಪ್ರಶ್ನಿಸಿದರು.

ಕೋವಿಡ್-19 ನಿಯಂತ್ರಣ ವಿಚಾರದಲ್ಲಿ ಸರ್ಕಾರ ಸಾವಿರಾರು ಕೋಟಿ ರೂ. ಲೂಟಿ ಹೊಡೆದಿದೆ. ಕೊರೊನಾ ಬಾರದ ಜನರನ್ನು ಸಹ ಕೋವಿಡ್ ಕೇರ್ ಗೆ ಕರೆತಂದು ಅವರ ಹೆಸರಲ್ಲಿ ಲಕ್ಷಾಂತರ ಹಣ ಲೂಟಿ ಮಾಡಿದ್ದಾರೆ. ಸರ್ಕಾರ ಖಾಸಗಿ ಆಸ್ಪತ್ರೆಯ ಜೊತೆಯಲ್ಲಿ ಶಾಮೀಲಾಗಿ ಜನರ ದುಡ್ಡು ಕೊಳ್ಳೆ ಹೊಡೆದಿದೆ. ಬಳ್ಳಾರಿಯಲ್ಲಿ ಅಮಾನವೀಯವಾಗಿ ಶವಗಳನ್ನು ಹೂತು ಹಾಕಿದೆ ಈ ಸರ್ಕಾರ. ಜನರ ಶವದ ಮೇಲೆ ಹಣ ಲೂಟಿ ಮಾಡಿದ್ದಾರೆ. ಕೊರೊನಾ ನಿಯಂತ್ರಿಸಲು ಸರ್ಕಾರಕ್ಕೆ ಬೆಂಬಲ ಕೊಡುತ್ತೇವೆ. ಆದರೆ ಜನರ ದುಡ್ಡು ಹೊಡೆಯಲು ಬಿಡುವುದಿಲ್ಲ ಎಂದು ಸರ್ಕಾರದ ವಿರುದ್ಧ ಗುಡುಗಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago