ದೀಪ ಹಚ್ಚಿ ಎಂದಾಗ ಹಚ್ವಿದೆವು, ಗಂಟೆ ಬಾರಿಸಿ ಎಂದಾಗ ಬಾರಿಸಿದೆವು , ಆದರೆ ಇನ್ನು ಮುಂದೆ ಸರ್ಕಾರ ಕೊರೊನಾ ನಿಯಂತ್ರಣದ ಹೆಸರಲ್ಲಿ ಲೂಟಿ ಹೊಡೆಯಲು ಬಿಡುವುದಿಲ್ಲ : ಡಿ.ಕೆ.ಶಿವಕುಮಾರ್ -Vishwanews24

ಬಳ್ಳಾರಿ: ದೀಪ ಹಚ್ಚಿ ಎಂದಾಗ ಹಚ್ವಿದೆವು, ಗಂಟೆ ಬಾರಿಸಿ ಎಂದಾಗ ಬಾರಿಸಿದೆವು, ಇನ್ನುಮುಂದೆ ನಾವು ಸುಮ್ಮನೆ ಕೂರುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹರಿಹಾಯ್ದರು.

ಬಳ್ಳಾರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾರ್ಚ್ ತಿಂಗಳಿಂದ ರಾಜ್ಯ ಹಾಗೂ ರಾಷ್ಟ್ರ ಕೊರೊನಾ ಸಂಕಷ್ಟದ ನೋವಿನಿಂದ ಬಳಲುತ್ತಿದೆ. ಕೇಂದ್ರ ಸರ್ಕಾರ ಗಂಟೆ ಬಾರಿಸಿ, ದೀಪ ಹಚ್ಚಿ ಎಂದು ಹೇಳಿದ ಹಾಗೆ ನಾವು ಕುಣಿದಿದ್ದೂ ಆಗಿದೆ. ಆದರೆ ಇನ್ನು ಮುಂದೆ ಸರ್ಕಾರ ಕೊರೊನಾ ನಿಯಂತ್ರಣದ ಹೆಸರಲ್ಲಿ ಲೂಟಿ ಹೊಡೆಯಲು ಬಿಡುವುದಿಲ್ಲ ಎಂದು ತಿವಿದರು.

ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ವಿಫಲವಾಗಿದೆ. ಸರ್ಕಾರದ ಬ್ರೇಕ್ ಫೇಲ್ ಆಗಿದೆ. ರಾಜ್ಯದಲ್ಲಿ ಸೋಂಕಿತ ಗೋಳಿನ ಕಥೆಯನ್ನು ಸಾಕಷ್ಟು ಸಿನಿಮಾ ತೆಗೆಯಬಹುದು ಅಷ್ಟು ಜನ ನರಳುತಿದ್ದಾರೆ. ಒಬ್ಬ ಮಾಜಿ ಮಂತ್ರಿ ಕೋವಿಡ್-19 ಆಸ್ಪತ್ರೆ ಬಿಲ್ 17 ಲಕ್ಷ ರೂ. ಆಗಿದೆ. ಹೀಗಿರುವಾಗ ಬಡವರ ಪರಿಸ್ಥಿತಿ ಹೇಗೆ ಎಂದು ಪ್ರಶ್ನಿಸಿದರು.

ಕೋವಿಡ್-19 ನಿಯಂತ್ರಣ ವಿಚಾರದಲ್ಲಿ ಸರ್ಕಾರ ಸಾವಿರಾರು ಕೋಟಿ ರೂ. ಲೂಟಿ ಹೊಡೆದಿದೆ. ಕೊರೊನಾ ಬಾರದ ಜನರನ್ನು ಸಹ ಕೋವಿಡ್ ಕೇರ್ ಗೆ ಕರೆತಂದು ಅವರ ಹೆಸರಲ್ಲಿ ಲಕ್ಷಾಂತರ ಹಣ ಲೂಟಿ ಮಾಡಿದ್ದಾರೆ. ಸರ್ಕಾರ ಖಾಸಗಿ ಆಸ್ಪತ್ರೆಯ ಜೊತೆಯಲ್ಲಿ ಶಾಮೀಲಾಗಿ ಜನರ ದುಡ್ಡು ಕೊಳ್ಳೆ ಹೊಡೆದಿದೆ. ಬಳ್ಳಾರಿಯಲ್ಲಿ ಅಮಾನವೀಯವಾಗಿ ಶವಗಳನ್ನು ಹೂತು ಹಾಕಿದೆ ಈ ಸರ್ಕಾರ. ಜನರ ಶವದ ಮೇಲೆ ಹಣ ಲೂಟಿ ಮಾಡಿದ್ದಾರೆ. ಕೊರೊನಾ ನಿಯಂತ್ರಿಸಲು ಸರ್ಕಾರಕ್ಕೆ ಬೆಂಬಲ ಕೊಡುತ್ತೇವೆ. ಆದರೆ ಜನರ ದುಡ್ಡು ಹೊಡೆಯಲು ಬಿಡುವುದಿಲ್ಲ ಎಂದು ಸರ್ಕಾರದ ವಿರುದ್ಧ ಗುಡುಗಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

9 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

9 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

9 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

9 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago