ಕಾರ್ಕಳ: ಮತದಾರರಲ್ಲಿ ಓಟಿನ ಜೊತೆಗೆ ನೋಟು ನೀಡಿ ಎಂದು ಚುನಾವಣೆಯ ಖರ್ಚಿಗೆ ಜನರಿಂದ ಹಣ ಕೇಳಿರುವ ಪ್ರಮೋದ್ ಮುತಾಲಿಕ್ ಅವರಿಗೆ ಹಣ ಮಾಡಲು ಕಾರ್ಕಳಕ್ಕೆ ಬಂದಿದ್ದ ಎಂದು ಪ್ರಶ್ನಿಸಿರುವ ಸುನಿಲ್ ಕುಮಾರ್ ಅವರ ಪ್ರಶ್ನೆಗೆ ಶ್ರೀ ರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ತಿರುಗೇಟು ನೀಡಿದ್ದಾರೆ.
ಶಾಸಕ ಸುನೀಲ್ ಕುಮಾರ್ ಅವರ ಟ್ವೀಟ್ ಗೆ ಕಾರ್ಕಳದಲ್ಲಿ ತಿರುಗೇಟು ನೀಡಿರುವ ಪ್ರಮೋದ್ ಮುತಾಲಿಕ್ ಅವರು, ಸುನಿಲ್ ಕುಮಾರ್ ಅವರ ಹೇಳಿಕೆಯಿಂದ ಅವರು ಆತಂಕಕ್ಕೆ ಒಳಗಾಗಿ ಹತಾಶೆಯ ಮನೋಭಾವನೆಯನ್ನು ವ್ಯಕ್ತಪಡಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಮುತಾಲಿಕ್ ಹಣ ಮಾಡುವವನಲ್ಲ, ದುಡ್ಡಿಗೋಸ್ಕರ ನಾನು ಬೆಳಗಾವಿಯಿಂದ ಕಾರ್ಕಳಕ್ಕೆ ಬರಬೇಕಾಗಿಲ್ಲ. ದುಡ್ಡೇ ಗಳಿಸಬೇಕಾಗಿದ್ದರೆ ನನಗೆ 45 ವರ್ಷ ಬೇಕಾಗಿರಲಿಲ್ಲ ಸುನಿಲ್ ಕುಮಾರ್ ಅವರೇ ನೀವು ಏನು ಆಗಿದ್ರಿ ಈಗೇನು ಆಗಿದ್ದೀರಿ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಿ ಈ ಆರೋಪ ನಿಮಗೆ ಶೋಭೆ ತರೋಲ್ಲ ಎಂದು ಟೀಕಿಸಿದ್ದಾರೆ.
ಹಾಗೂ ಕಾರ್ಕಳದ 40 ಹಳ್ಳಿ ತಲುಪಲು ನಾನೊಬ್ಬನೆ ಪಾದಯಾತ್ರೆ ಮಾಡಲು ಸಾಧ್ಯವಿಲ್ಲ ನನ್ನ ಬಳಿ ಹಣವಿಲ್ಲ. ಯಾವುದೇ ರೀತಿಯ ಆಸ್ತಿ ಇಲ್ಲ. ನಾನು ನಿಮ್ಮ ತರ ಆಸ್ತಿ ಬ್ಯಾಂಕ್ ಬ್ಯಾಲೆನ್ಸ್, ಬೇನಾಮಿ ಜಮೀನು ಮಾಡಿದ್ದರೆ ಹಣ ಕೇಳುತ್ತಿರಲಿಲ್ಲ. ಕಾರ್ಯಕರ್ತರ ಓಡಾಟ, ಊಟ, ತಿಂಡಿ, ಪ್ರವಾಸಕ್ಕೆ ನೂರು ರೂಪಾಯಿ ಕೇಳಿದ್ದೇನೆ. ಮತದಾರರಿಗೆ ಡೋಂಗಿ ಹಿಂದೂವಾದ, ಭ್ರಷ್ಟಾಚಾರ ವಿರುದ್ಧ ಹೋರಾಡಲು, ಅಸಲಿ ಹಿಂದುತ್ವ ತೋರಿಸಿ ಕೊಡಲು ಮತದ ಜೊತೆ ಮತದಾರರಿಂದ ನೂರು ರೂಪಾಯಿ ಕೇಳುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…