ಚಿಕ್ಕಮಗಳೂರು: ಗಂಡಸರಲ್ಲಿ ಒಂದು ಮನಸ್ಥಿತಿ ಇದೆ. ಅಧಿಕಾರ ತಮ್ಮಲ್ಲೆ ಇರಬೇಕು ಎಂದು ದುಡ್ಡಿನ ದರ್ಪದಿಂದ, ಅಹಂಕಾರದಿಂದ ʼಗೋಬ್ಯಾಕ್ ಶೋಭಾʼ ಅಭಿಯಾನ ಮಾಡಿಸಿದ್ದಾರೆ. ಕಳೆದ ಚುನಾವಣೆಯಲ್ಲೂ ಮಾಡಿಸಿದ್ದರು. ಇದಕ್ಕೆ ಹೈಕಮಾಂಡ್ ಸರಿಯಾದ ಉತ್ತರ ಕೊಡಲಿದೆ ಎಂಬ ವಿಶ್ವಾಸವಿದೆ ಎಂದು ಕೇಂದ್ರ ಕೃಷಿ ಮತ್ತು ರಾಜ್ಯ ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಗುಡುಗಿದರು.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನ್ನ ವಿರುದ್ದ ಕಳೆದ ಚುನಾವಣೆ ಯಲ್ಲಿ ಗೋಬ್ಯಾಕ್ ಮಾಡಿದ್ದರು. ಈ ಚುನಾವಣೆಯಲ್ಲೂ ಮಾಡಿದ್ದಾರೆ. ವ್ಯವಸ್ಥಿತವಾಗಿ ಮಾಡಿದ್ದಾರೆ. ಮಾಡಿಸುತ್ತಿದ್ದಾರೆ. ಹೈಕಮಾಂಡ್ ನನಗೆ ಯಾವ ಜವಾಬ್ದಾರಿ ನೀಡಿದೆ ಪ್ರಾಮಾಣಿಕವಾಗಿ, ಕಪ್ಪು ಚುಕ್ಕೆ ಬಾರದಂತೆ ರಾಜಕೀಯ ಮಾಡಿದ್ದೇನೆ. ಯಾರು ಷಡ್ಯಂತ್ರ ಮಾಡಿದರು. ಉತ್ತರ ನಾನು ಕೊಡಲ್ಲ ಹೈಕಮಾಂಡ್, ಹಿರಿಯರು ಕೊಡುತ್ತಾರೆ” ಎಂದು ಆಕ್ರೋಶ ಹೊರ ಹಾಕಿದರು.
ಪತ್ರ ಯಾರು ಬರೆದರು, ಯಾರು ಪೋಸ್ಟ್ ಮಾಡಿದರು, ಎಷ್ಟು ಪೋಸ್ಟ್ ಮಾಡಿದರು. ಇದೆಲ್ಲದರ ಬಗ್ಗೆ ಕೇಂದ್ರ ಕೂಡ ವರದಿ ತರಿಸಿ ಕೊಂಡಿದೆ. ಸತ್ಯ ಕೇಂದ್ರದವರಿಗೆ ತಿಳಿದಿದೆ ಎಂಬ ವಿಶ್ವಾಸವಿದೆ ಎಂದರು.
ಕಾಂಗ್ರೆಸ್ ನಲ್ಲಿ ಏನು ನಡೆಯುತ್ತಿದೆ ಎಂದು ಅವರಿಗೆ ಗೊತ್ತಿದೆ. ಅವರ ಎಂಎಲ್ಎಗಳನ್ನು ಉಳಿಸಿಕೊಳ್ಳಲು ಆಗಲ್ಲ ಎಂದು ಬಿಜೆಪಿ ಎಂಎಲ್ಎಗಳನ್ನು ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಚುನಾವಣೆ ಆದ ಮೇಲೆ ಎಲ್ಲವೂ ಆಚೆ ಬರುತ್ತದೆ. ಕಾಂಗ್ರೆಸ್ ಆಂತರಿಕ ರಾಜಕೀಯದ ಬಗ್ಗೆ ನಾನು ಕಮೆಂಟ್ ಮಾಡಲ್ಲ. ಮುಖ್ಯಮಂತ್ರಿ, ಉಪ ಮುಖ್ಯ ಮಂತ್ರಿಗಳ ನಡುವೆ ಏನು ನಡೆಯುತ್ತಿದೆ ಎಂದು ಚುನಾವಣೆ ಬಳಿಕ ಆಚೆಗೆ ಬರುತ್ತದೆ ಎಂದರು.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…