ಚಿಕ್ಕಮಗಳೂರು: ಗಂಡಸರಲ್ಲಿ ಒಂದು ಮನಸ್ಥಿತಿ ಇದೆ. ಅಧಿಕಾರ ತಮ್ಮಲ್ಲೆ ಇರಬೇಕು ಎಂದು ದುಡ್ಡಿನ ದರ್ಪದಿಂದ, ಅಹಂಕಾರದಿಂದ ʼಗೋಬ್ಯಾಕ್ ಶೋಭಾʼ ಅಭಿಯಾನ ಮಾಡಿಸಿದ್ದಾರೆ. ಕಳೆದ ಚುನಾವಣೆಯಲ್ಲೂ ಮಾಡಿಸಿದ್ದರು. ಇದಕ್ಕೆ ಹೈಕಮಾಂಡ್ ಸರಿಯಾದ ಉತ್ತರ ಕೊಡಲಿದೆ ಎಂಬ ವಿಶ್ವಾಸವಿದೆ ಎಂದು ಕೇಂದ್ರ ಕೃಷಿ ಮತ್ತು ರಾಜ್ಯ ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಗುಡುಗಿದರು.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನ್ನ ವಿರುದ್ದ ಕಳೆದ ಚುನಾವಣೆ ಯಲ್ಲಿ ಗೋಬ್ಯಾಕ್ ಮಾಡಿದ್ದರು. ಈ ಚುನಾವಣೆಯಲ್ಲೂ ಮಾಡಿದ್ದಾರೆ. ವ್ಯವಸ್ಥಿತವಾಗಿ ಮಾಡಿದ್ದಾರೆ. ಮಾಡಿಸುತ್ತಿದ್ದಾರೆ. ಹೈಕಮಾಂಡ್ ನನಗೆ ಯಾವ ಜವಾಬ್ದಾರಿ ನೀಡಿದೆ ಪ್ರಾಮಾಣಿಕವಾಗಿ, ಕಪ್ಪು ಚುಕ್ಕೆ ಬಾರದಂತೆ ರಾಜಕೀಯ ಮಾಡಿದ್ದೇನೆ. ಯಾರು ಷಡ್ಯಂತ್ರ ಮಾಡಿದರು. ಉತ್ತರ ನಾನು ಕೊಡಲ್ಲ ಹೈಕಮಾಂಡ್, ಹಿರಿಯರು ಕೊಡುತ್ತಾರೆ” ಎಂದು ಆಕ್ರೋಶ ಹೊರ ಹಾಕಿದರು.
ಪತ್ರ ಯಾರು ಬರೆದರು, ಯಾರು ಪೋಸ್ಟ್ ಮಾಡಿದರು, ಎಷ್ಟು ಪೋಸ್ಟ್ ಮಾಡಿದರು. ಇದೆಲ್ಲದರ ಬಗ್ಗೆ ಕೇಂದ್ರ ಕೂಡ ವರದಿ ತರಿಸಿ ಕೊಂಡಿದೆ. ಸತ್ಯ ಕೇಂದ್ರದವರಿಗೆ ತಿಳಿದಿದೆ ಎಂಬ ವಿಶ್ವಾಸವಿದೆ ಎಂದರು.
ಕಾಂಗ್ರೆಸ್ ನಲ್ಲಿ ಏನು ನಡೆಯುತ್ತಿದೆ ಎಂದು ಅವರಿಗೆ ಗೊತ್ತಿದೆ. ಅವರ ಎಂಎಲ್ಎಗಳನ್ನು ಉಳಿಸಿಕೊಳ್ಳಲು ಆಗಲ್ಲ ಎಂದು ಬಿಜೆಪಿ ಎಂಎಲ್ಎಗಳನ್ನು ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಚುನಾವಣೆ ಆದ ಮೇಲೆ ಎಲ್ಲವೂ ಆಚೆ ಬರುತ್ತದೆ. ಕಾಂಗ್ರೆಸ್ ಆಂತರಿಕ ರಾಜಕೀಯದ ಬಗ್ಗೆ ನಾನು ಕಮೆಂಟ್ ಮಾಡಲ್ಲ. ಮುಖ್ಯಮಂತ್ರಿ, ಉಪ ಮುಖ್ಯ ಮಂತ್ರಿಗಳ ನಡುವೆ ಏನು ನಡೆಯುತ್ತಿದೆ ಎಂದು ಚುನಾವಣೆ ಬಳಿಕ ಆಚೆಗೆ ಬರುತ್ತದೆ ಎಂದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…