Featured

ದುಡ್ಡು ಕೊಟ್ಟು ಡಾಕ್ಟರೇಟ್‌ ಪದವಿ ಪಡೆಯುತ್ತಿರುವುದು ಅಸಹ್ಯ ತಂದಿದೆ,  ನನ್ನ ಹೆಸರಿನ ಮುಂದೆ ‘ಡಾ’ ಬೇಡ :  ಹೊಸದುರ್ಗ ಕುಂಚಿಟಿಗ ಶ್ರೀ – Vishwanews24

ದುಡ್ಡು ಕೊಟ್ಟು ಡಾಕ್ಟರೇಟ್‌ ಪದವಿ ಪಡೆಯುತ್ತಿರುವುದು ಅಸಹ್ಯ ತಂದಿದೆ,  ನನ್ನ ಹೆಸರಿನ ಮುಂದೆ ‘ಡಾ’ ಬೇಡ :  ಹೊಸದುರ್ಗ ಕುಂಚಿಟಿಗ ಶ್ರೀ

ಹೊಸದುರ್ಗ :ಇನ್ಮುಂದೆ ತಮ್ಮ ಹೆಸರಿನ ಮುಂದೆ “ಡಾ” ಎಂದು ಬಳಸದಂತೆ ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶಾಂತವೀರ ಸ್ವಾಮೀಜಿ ,ಮಠದ ಭಕ್ತರಿಗೆ, ಮಾಧ್ಯಮಗಳಿಗೆ ಮತ್ತು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿರುವ ಅವರು, “ಇತ್ತೀಚಿಗೆ ಗೌರವ ಡಾಕ್ಟರೇಟ್ ಎನ್ನುವುದು ವ್ಯಾಪಾರೀಕರಣವಾಗಿದೆ. ದುಡ್ಡಿನ ಆಸೆಗಾಗಿ ಪ್ರಬಲರಿಗೆ ಹಾಗೂ ಹಣವಂತರಿಗೆ ಡಾಕ್ಟರೇಟ್ ಪದವಿಯನ್ನು ನೀಡುತ್ತಿದ್ದಾರೆ. ಜೊತೆಗೆ ಹಣವಂತರು ದುಡ್ಡು ಕೊಟ್ಟು ಡಾಕ್ಟರೇಟ್‌ ಪದವಿ ಪಡೆಯುತ್ತಿರುವುದು ಅಸಹ್ಯ ತಂದಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಇತ್ತೀಚಿನ ದಿನಗಳಲ್ಲಿ ಬೀದಿ ಬದಿಯ ತರಕಾರಿ ವ್ಯಾಪಾರದಂತೆ ಗೌರವ ಡಾಕ್ಟರೇಟ್ ಪದವಿಗಳನ್ನು 10, 20 ಸಾವಿರಕ್ಕೆ ಮಾರಾಟ ಮಾಡಿಕೊಳ್ಳಲಾಗುತ್ತಿದೆ. ದುರ್ಬಲರು, ಶ್ರೀಮಂತರು ದುಡ್ಡು ಕೊಟ್ಟು ಡಾಕ್ಟರೇಟ್ ಪದವಿ ಪಡೆದು ಪ್ರತಿಷ್ಠೆ ತೋರಿಸುತ್ತಾರೆ. ಮಠಾಧೀಶರನ್ನು ಸಹ ಬಿಟ್ಟಿಲ್ಲ ಇಂತಹ ನಕಲಿಗಳಿಂದ ಅಸಲಿ, ಸಮರ್ಥರು, ಅರ್ಹರಿಗೆ ಆಗೌರವ ತರುವಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಹೀಗಾಗಿ ನನಗೆ ನೀಡಿದ ಡಾಕ್ಟರೇಟ್ ಪದವಿಯನ್ನು ತಿರಸ್ಕರಿಸಲಾಗಿದೆ ಎಂದರು. ಅಲ್ಲದೇ ಡಾಕ್ಟರೇಟ್ ಪದವಿ ನೀಡುವುದಾಗಿ ಎರಡು ದೇಶಗಳಿಂದ ಬಂದಿರುವ ಮನವಿಯನ್ನು ಸ್ವೀಕರಿಸುವುದಿಲ್ಲ ಎಂದು ಶ್ರೀಗಳು ಸ್ಪಷ್ಟಪಡಿಸಿದ್ದಾರೆ.

2018ರಲ್ಲಿ ಗೌಡಾಶ್ರೀ ಶಾಂತವೀರ ಸ್ವಾಮೀಜಿಯವರ ಕೃಷಿ ಮತ್ತು ಸಮಾಜ ಸೇವೆಯನ್ನು ಗುರುತಿಸಿ, ಈ ಹಿಂದೆ 2018 ಮತ್ತು 2019ನೇ ಸಾಲಿನಲ್ಲಿ ಡಾಕ್ಟರೇಟ್ ಪದವಿಯನ್ನು ಮೈಸೂರಿನಲ್ಲಿ ನೀಡಿ ಗೌರವಿಸಲಾಗಿತ್ತು. ಆ ಬಳಿಕ ಶ್ರೀಗಳನ್ನು ಎಲ್ಲೆಡೆ ಉಲ್ಲೇಖಿಸುವಾಗ ಹೆಸರಿನಲ್ಲಿ ಡಾ. ಶಾಂತವೀರ ಸ್ವಾಮೀಜಿ ಎಂದು ಸೇರಿಸಲಾಗಿತ್ತು. ಆದರೆ ಇದೀಗ ಶ್ರೀಗಳು ಈ ರೀತಿ ಸೇರಿಸುವುದು ಬೇಡ ಎಂದು ತಿಳಿಸಿದ್ದಾರೆ. ಅಲ್ಲದೇ ತನಗೆ ಬಂದ ಗೌರವ ಡಾಕ್ಟರೇಟ್ ಪದವಿಗಳನ್ನು ನಯವಾಗಿ ತಿರಸ್ಕರಿಸಿರುವುದಾಗಿ ಹೇಳಿದ್ದಾರೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

8 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

8 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

8 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

11 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

12 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

12 hours ago