ಬೆಂಗಳೂರು: ದುಡ್ಡು ಮಾಡಬೇಕು, ಹಣ ಚೆಲ್ಲಬೇಕು, ಚುನಾವಣೆ ಗೆಲ್ಲಬೇಕು ಎಂಬುವುದಷ್ಟೇ ಬಿಜೆಪಿಗೆ ಇರುವ ಧ್ಯೇಯ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಇಂದು ಕೆಪಿಸಿಸಿ ಕಛೇರಿಯಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್.. ಇಂದು ಚುನಾವಣೆ ನಡೆಯುತ್ತಿರುವ ಪಕ್ಷದ ವರಿಷ್ಠನಾಯಕರು ಹಾಗೂ ಮೂರು ಕ್ಷೇತ್ರಗಳ ನಾಯಕರೊಂದಿಗೆ ಚರ್ಚೆ ನಡೆಸಲಾಗಿದೆ. ಒಳ್ಳೆಯ ಸ್ಪರ್ಧೆ ಒಡ್ಡುವ ಬಗ್ಗೆ ಚರ್ಚೆ ಮಾಡಿದ್ದೇವೆ. ರಾಜ್ಯದಲ್ಲಿ ಬಿಜೆಪಿ ತಲೆ ತಗ್ಗಿಸುವ ರೀತಿ ಕೆಲಸ ಮಾಡ್ತಿದೆ, ಅವರಿಗೆ ಯಾವುದೇ ಕಾರ್ಯಕ್ರಮವಿಲ್ಲ, ಉತ್ತಮ ಉದ್ದೇಶವಿಲ್ಲ. CM ಆಡಿಯೋ ರೆಕಾರ್ಡಿಂಗ್ ಹೊರಬಂದಿದೆ, ಇವತ್ತು ಬೇರೆ ಬೇರೆ CD ಗಳು ಬರ್ತಿವೆ. ಎಲ್ಲಾ ಬೆಳವಣಿಗೆಗಳಿಂದ ರಾಜ್ಯ ಅಸ್ತವ್ಯಸ್ಥವಾಗ್ತಿದೆ. ಅದಾನಿ ಅಂಬಾನಿಯವರನ್ನ ಶ್ರೀಮಂತರ ಆದಾಯ ಹೆಚ್ಚಾಗುತ್ತಿದೆ, ಬಡವರು ಬಡವರಾಗೇ ಉಳಿಯುತ್ತಿದ್ದಾರೆ. ಕೆಂದ್ರ ಸರ್ಕಾರ ಅತ್ಯಂತ ಹೀನಾಯವಾದ ಆಡಳಿತವನ್ನ ನೀಡುತ್ತಿದೆ. ರಾಜ್ಯದಲ್ಲಿ ಸರ್ಕಾರ ಇದ್ಯೋ ಇಲ್ವೋ ಗೊತ್ತಿಲ್ಲ, ಡಿಪಾರ್ಟ್ ಮೆಂಟ್ಗಳನ್ನ ಲೂಟಿ ಮಾಡ್ತಿದ್ದಾರೆ, ಟ್ರಾನ್ಸ್ಫರ್ ದಂಧೆ ನಡೆಯುತ್ತಿದೆ. ಇದೆಲ್ಲವನ್ನೂ ಜನ ನೋಡ್ತಿದ್ದಾರೆ, ಜನ ಸರ್ಕಾರಕ್ಕೆ ತಕ್ಕ ಪಾಠವನ್ನ ಕಲಿಸೇ ಕಲಿಸುತ್ತಾರೆ. ನಾವು ಪ್ರತೀ ಕ್ಷೇತ್ರಕ್ಕೆ ಉತ್ತಮವಾದ ಅಭ್ಯರ್ಥಿಗಳನ್ನ ಹಾಕಿದ್ದೇವೆ, ಆದ್ದರಿಂದ ಸುಲಭವಾಗಿ ಗೆಲ್ಲುತ್ತೇವೆ ಎಂದಿದ್ದಾರೆ.
ಇದನ್ನೂ ಓದಿ : ಲಸಿಕೆ ಪಡೆದ ಬಳಿಕ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಕೋವಿಡ್ ಪಾಸಿಟಿವ್ -Vishwanews24
ಇದೇ ವೇಳೆ ತಮಿಳುನಾಡು ವಿಧಾನಸಭೆ ಚುನಾವಣೆಯ ಬಗ್ಗೆ ಮಾತನಾಡಿದ ಗುಂಡೂರಾವ್ ಬಿಜೆಪಿ ಜೊತೆ ಹೋಗಲು ಎಐಡಿಎಂಕೆಗೂ ಇಷ್ಟವಿಲ್ಲ. ಆದರೂ ಒತ್ತಾಯ ಮಾಡಿ ಅವರ ಜೊತೆ ಬಿಜೆಪಿ ಒಪ್ಪಂದ ಮಾಡಿಕೊಂಡಿದೆ. ಯಾರು ವಿರುದ್ಧವಾಗಿ ಮಾತನಾಡ್ತಾರೆ ಅವರ ಮೇಲೆ ರೇಡ್ ಮಾಡಿಸೋದು, ಮೀಡಿಯಾಗಳ ಮೇಲೂ ಹಿಡಿತ ಸಾಧಿಸೋದು ಹೀಗೆ ಅಧಿಕಾರ ಹಿಡಿಯೋಕೆ ಎಲ್ಲಾ ಕುತಂತ್ರಗಳನ್ನ ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…