ದುಬೈ : ರಂಜಾನ್ ಹಬ್ಬದ ರಜೆ ಮುಗಿಸಿ ಓಮನ್ ನಿಂದ ದುಬೈಗೆ ತೆರಳುತ್ತಿದ್ದ ಬಸ್ ಸಂಯುಕ್ತ ಅರಬ್ ರಾಷ್ಟ್ರದಲ್ಲಿ ರಸ್ತೆ ಸೂಚನ ಫಲಕಕ್ಕೆ ಬಸ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ 17 ಮಂದಿ ಸಾವಿಗೀಡಾಗಿದ್ದಾರೆ. ಇದರಲ್ಲಿ ಎಂಟು ಮಂದಿ ಭಾರತೀಯರು ಎಂದು ದುಬೈನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಹೇಳಿದೆ.
ಘಟನೆಯಲ್ಲಿ ಸಾವನ್ನಪ್ಪಿರುವ 17 ಮಂದಿಯಲ್ಲಿ 8 ಜನ ಭಾರತೀಯರು ಎನ್ನಲಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ದುಬೈನ ಭಾರತೀಯ ರಾಯಭಾರಿ ಘಟನೆಯಲ್ಲಿ ಸತ್ತವರ ಸಂಖ್ಯೆಯನ್ನು ಖಚಿತಪಡಿಸಿದ್ದಾರೆ. ಮೃತಪಟ್ಟವರ ಸಂಬಂಧಿಕರ ಸಂಪರ್ಕದಲ್ಲಿ ಇರುವುದಾಗಿ ತಿಳಿಸಿದ್ದಾರೆ. ಇನ್ನು ಘಟನೆ ಕುರಿತು ದುಬೈ ಪೊಲೀಸರು ಟ್ವೀಟ್ ಮಾಡಿದ್ದಾರೆ. ಬಸ್ ನಲ್ಲಿ 31 ಜನರು ಪ್ರಯಾಣಿಸುತ್ತಿದ್ದರು. ಮೆಟ್ರೋ ಸ್ಟೇಷನ್ ಬಳಿ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.
ಮೃತ ಭಾರತೀಯರನ್ನು ರಾಜಗೋಪಾಲನ್, ಫೆರೋಜ್ ಖಾನ್ ಪಠಾಣ್, ರೇಶ್ಮಾ ಫೆರೊಜ್ ಖಾನ್ ಪಠಾಣ್, ದೀಪಕ್ ಕುಮಾರ್, ಜಮಾಲುದ್ದೀನ್ ಅರಕ್ಕವೀಟ್ಟಿಲ್, ಕಿರಣ್ ಜಾನ್ನಿ, ವಾಸುದೇವ್ ಮತ್ತು ತಿಲಕ್ರಾಮ್ ಜವಾಹರ್ ಠಾಕೂರ್ ಎಂದು ಗುರುತಿಸಲಾಗಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…