ದುಬೈ : ರಂಜಾನ್ ಹಬ್ಬದ ರಜೆ ಮುಗಿಸಿ ಓಮನ್ ನಿಂದ ದುಬೈಗೆ ತೆರಳುತ್ತಿದ್ದ ಬಸ್ ಸಂಯುಕ್ತ ಅರಬ್ ರಾಷ್ಟ್ರದಲ್ಲಿ ರಸ್ತೆ ಸೂಚನ ಫಲಕಕ್ಕೆ ಬಸ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ 17 ಮಂದಿ ಸಾವಿಗೀಡಾಗಿದ್ದಾರೆ. ಇದರಲ್ಲಿ ಎಂಟು ಮಂದಿ ಭಾರತೀಯರು ಎಂದು ದುಬೈನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಹೇಳಿದೆ.
ಘಟನೆಯಲ್ಲಿ ಸಾವನ್ನಪ್ಪಿರುವ 17 ಮಂದಿಯಲ್ಲಿ 8 ಜನ ಭಾರತೀಯರು ಎನ್ನಲಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ದುಬೈನ ಭಾರತೀಯ ರಾಯಭಾರಿ ಘಟನೆಯಲ್ಲಿ ಸತ್ತವರ ಸಂಖ್ಯೆಯನ್ನು ಖಚಿತಪಡಿಸಿದ್ದಾರೆ. ಮೃತಪಟ್ಟವರ ಸಂಬಂಧಿಕರ ಸಂಪರ್ಕದಲ್ಲಿ ಇರುವುದಾಗಿ ತಿಳಿಸಿದ್ದಾರೆ. ಇನ್ನು ಘಟನೆ ಕುರಿತು ದುಬೈ ಪೊಲೀಸರು ಟ್ವೀಟ್ ಮಾಡಿದ್ದಾರೆ. ಬಸ್ ನಲ್ಲಿ 31 ಜನರು ಪ್ರಯಾಣಿಸುತ್ತಿದ್ದರು. ಮೆಟ್ರೋ ಸ್ಟೇಷನ್ ಬಳಿ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.
ಮೃತ ಭಾರತೀಯರನ್ನು ರಾಜಗೋಪಾಲನ್, ಫೆರೋಜ್ ಖಾನ್ ಪಠಾಣ್, ರೇಶ್ಮಾ ಫೆರೊಜ್ ಖಾನ್ ಪಠಾಣ್, ದೀಪಕ್ ಕುಮಾರ್, ಜಮಾಲುದ್ದೀನ್ ಅರಕ್ಕವೀಟ್ಟಿಲ್, ಕಿರಣ್ ಜಾನ್ನಿ, ವಾಸುದೇವ್ ಮತ್ತು ತಿಲಕ್ರಾಮ್ ಜವಾಹರ್ ಠಾಕೂರ್ ಎಂದು ಗುರುತಿಸಲಾಗಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…