ದುಬೈಯಲ್ಲಿ ಮಂಗಳೂರಿನ ಯುವಕ ಹೃದಯಾಘಾತದಿಂದ ನಿಧನ – Vishwanews24

Featured, ಅಂತಾರಾಷ್ಟ್ರೀಯ ನ್ಯೂಸ್, ದಕ್ಷಿಣ ಕನ್ನಡ

ಮಂಗಳೂರು : ಯುವಕ ದುಬೈಯಲ್ಲಿ ಹೃದಯಾಘಾತದಿಂದ ನಿಧನ

ಮಂಗಳೂರು : ಮಂಗಳೂರು ನಗರದ ಕೂಳೂರು ಪಂಜಿಮೊಗರು ವಿದ್ಯಾನಗರದ ಯುವಕ ದುಬೈಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಅಖ್ತರ್(27) ಹೃದಯಾಘಾತಕ್ಕೆ ಬಲಿಯಾದ ಯುವಕನಾಗಿದ್ದಾರೆ. ನಗರದ ಪಂಜಿಮೊಗರು ವಿದ್ಯಾನಗರದ ಮುಹಮ್ಮದ್ ಎಂಬವರು ಪುತ್ರ ಅಖ್ತರ್ ಕಳೆದ 7 ತಿಂಗಳಿನಿಂದ ದುಬೈಯಲ್ಲಿ ಕೆಲಸದಲ್ಲಿದ್ದರು. ರವಿವಾರ ಕರ್ತವ್ಯ ಮುಗಿಸಿ ರೂಮಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಅಖ್ತರ್ ಏಳದೇ ಇದ್ದಾಗ ಸಂಗಡಿಗರು ಪರಿಶೀಲಿಸಿದಾದ ಅವರು ಇಹಲೋಕ ತ್ಯಜಿಸಿದ್ದರು ಎಂದು ತಿಳಿದುಬಂದಿದೆ.

ಮೃತದೇಹವನ್ನು ಊರಿಗೆ ತರುವ ನಿಟ್ಟಿನಲ್ಲಿ ಕೆಸಿಎಫ್ ಸಂಘಟನೆಯ ಪದಾಧಿಕಾರಿಗಳು, ಸೌದಿಯಲ್ಲಿರುವ ಮೃತರ ಸಹೋದರ ಇರ್ಫಾನ್ ಸ್ಥಳಕ್ಕೆ ಆಗಮಿಸಿದ್ದು ಕ್ರಮ ಕೈಗೊಂಡಿದ್ದಾರೆ. ಮೃತರು ತಂದೆ, ತಾಯಿ, ಇಬ್ಬರು ಸಹೋದರರು, ಇಬ್ಬರು ಸಹೋದರಿಯರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

ಲಾರಿ ಹಾಗೂ ಟಾಟಾ ಸುಮೋ ನಡುವೆ ಭೀಕರ ಅಪಘಾತ: ಮಗು ಸೇರಿ 13 ಜನ ಮೃತ್ಯು – Vishwanews24

Leave a Reply