Featured

ದುಬೈ: ಒಂದೇ ದಿನದಲ್ಲಿ ಸುರಿಯಿತು ಒಂದೂವರೆ ವರ್ಷದ ಮಳೆ – Vishwanews24

ದುಬೈ: ಒಂದೇ ದಿನದಲ್ಲಿ ಸುರಿಯಿತು ಒಂದೂವರೆ ವರ್ಷದ ಮಳೆ

ದುಬೈ : ಕಳೆದ ವರ್ಷ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆಯ ಸಮಾವೇಶವನ್ನು ಆಯೋಜಿಸಿದ್ದ ಯುಎಇ ಕಳೆದ 75 ವರ್ಷಗಳಲ್ಲೇ ದಾಖಲೆ ಪ್ರಮಾಣದ ಮಳೆಗೆ ಸಾಕ್ಷಿಯಾಗಿದೆ. ದುಬೈಯಲ್ಲಿ ಸಾಮಾನ್ಯವಾಗಿ ಒಂದೂವರೆ ವರ್ಷದ ಅವಧಿಯಲ್ಲಿ ಸುರಿಯುವ ಮಳೆ ಒಂದೇ ದಿನದಲ್ಲಿ ಸುರಿದಿದೆ ಎಂದು ಸರಕಾರ ಹೇಳಿದೆ.

ಕಳೆದ 75 ವರ್ಷಗಳಲ್ಲೇ ದಾಖಲೆ ಮಳೆಗೆ ಯುಎಇ ಸಾಕ್ಷಿಯಾಗಿದೆ. ಅಲ್‍ಐನ್ ನಗರದಲ್ಲಿರುವ ಖತ್ಮ್-ಅಲ್ ಪ್ರದೇಶದಲ್ಲಿ 24 ಗಂಟೆಗೂ ಕಡಿಮೆ ಅವಧಿಯಲ್ಲಿ 254.8 ಮಿ.ಮೀ ಮಳೆಯಾಗಿದ್ದು ದೇಶದ ಹವಾಮಾನ ಇತಿಹಾಸದಲ್ಲೇ ಅಸಾಧಾರಣ ವಿದ್ಯಮಾನ ಇದಾಗಿದೆ. ದುಬೈಯಲ್ಲಿ ವ್ಯಾಪಕ ಪ್ರವಾಹದ ಸ್ಥಿತಿ ಉಂಟಾಗಿದ್ದು 1.5 ವರ್ಷ ಸುರಿಯುವ ಮಳೆ ಒಂದೇ ದಿನ ಸುರಿದಿದೆ. 24 ಗಂಟೆಗಳಲ್ಲಿ ಸುಮಾರು 5 ಇಂಚಿನಷ್ಟು ಮಳೆಯಾಗಿದೆ ‘ ಎಂದು ರಾಷ್ಟ್ರೀಯ ಹವಾಮಾನ ಕೇಂದ್ರ (ಎನ್‍ಸಿಎಂ) ಟ್ವೀಟ್(ಎಕ್ಸ್) ಮಾಡಿದೆ. ಯುಎಇಯ 7 ಎಮಿರೇಟ್ಸ್‍ಗಳಲ್ಲಿ ಒಂದಾಗಿರುವ ದುಬೈನಲ್ಲಿರುವ ಮಾಲ್‍ಗಳು, ವಿಮಾನ ನಿಲ್ದಾಣಗಳು ಜಲಾವೃತಗೊಂಡಿವೆ. ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರವಾಹದ ಕಾರಣದಿಂದ ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಗಿದೆ. ತೀರಾ ಅಗತ್ಯವಿದ್ದರೆ ಮಾತ್ರ ವಿಮಾನ ನಿಲ್ದಾಣಕ್ಕೆ ಬರುವಂತೆ ಪ್ರಯಾಣಿಕರಿಗೆ ಸೂಚಿಸಲಾಗಿದೆ. ದುಬೈನ ಪ್ರಮುಖ ಮಾಲ್‍ಗಳಾದ ದುಬೈ ಮಾಲ್ ಮತ್ತು ಮಾಲ್ ಆಫ್ ಎಮಿರೇಟ್ಸ್ ಎರಡರಲ್ಲೂ ನೀರು ನುಗ್ಗಿದ್ದರಿಂದ ಸಮಸ್ಯೆಯಾಗಿದೆ. ಮೆಟ್ರೋ ನಿಲ್ದಾಣಗಳಲ್ಲೂ ಮೊಣಕಾಲು ಮಟ್ಟದಲ್ಲಿ ನೀರು ನಿಂತಿದೆ.

ಯುಎಇಯ ಕೆಲವು ಭಾಗಗಳಲ್ಲಿ ಸುರಿದ ಭಾರೀ ಮಳೆ ಮತ್ತು ದುಬೈಯಲ್ಲಿ ಪ್ರವಾಹದಂತಹ ಸ್ಥಿತಿ ನೆಲೆಸಿರುವ ಹಿನ್ನೆಲೆಯಲ್ಲಿ ದುಬೈಯಲ್ಲಿರುವ ಭಾರತೀಯ ಕಾನ್ಸುಲೇಟ್ ಭಾರತೀಯ ಪ್ರಜೆಗಳಿಗೆ ಸಹಾಯವಾಣಿ ಸಂಖ್ಯೆಗಳನ್ನು ನೀಡಿದೆ. (+971501205172, +971569950590, +971507347676, +971585754213).

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

18 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

18 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

19 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

20 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

20 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

20 hours ago