Featured

ದುಬೈ: ಒಂದೇ ದಿನದಲ್ಲಿ ಸುರಿಯಿತು ಒಂದೂವರೆ ವರ್ಷದ ಮಳೆ – Vishwanews24

ದುಬೈ: ಒಂದೇ ದಿನದಲ್ಲಿ ಸುರಿಯಿತು ಒಂದೂವರೆ ವರ್ಷದ ಮಳೆ

ದುಬೈ : ಕಳೆದ ವರ್ಷ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆಯ ಸಮಾವೇಶವನ್ನು ಆಯೋಜಿಸಿದ್ದ ಯುಎಇ ಕಳೆದ 75 ವರ್ಷಗಳಲ್ಲೇ ದಾಖಲೆ ಪ್ರಮಾಣದ ಮಳೆಗೆ ಸಾಕ್ಷಿಯಾಗಿದೆ. ದುಬೈಯಲ್ಲಿ ಸಾಮಾನ್ಯವಾಗಿ ಒಂದೂವರೆ ವರ್ಷದ ಅವಧಿಯಲ್ಲಿ ಸುರಿಯುವ ಮಳೆ ಒಂದೇ ದಿನದಲ್ಲಿ ಸುರಿದಿದೆ ಎಂದು ಸರಕಾರ ಹೇಳಿದೆ.

ಕಳೆದ 75 ವರ್ಷಗಳಲ್ಲೇ ದಾಖಲೆ ಮಳೆಗೆ ಯುಎಇ ಸಾಕ್ಷಿಯಾಗಿದೆ. ಅಲ್‍ಐನ್ ನಗರದಲ್ಲಿರುವ ಖತ್ಮ್-ಅಲ್ ಪ್ರದೇಶದಲ್ಲಿ 24 ಗಂಟೆಗೂ ಕಡಿಮೆ ಅವಧಿಯಲ್ಲಿ 254.8 ಮಿ.ಮೀ ಮಳೆಯಾಗಿದ್ದು ದೇಶದ ಹವಾಮಾನ ಇತಿಹಾಸದಲ್ಲೇ ಅಸಾಧಾರಣ ವಿದ್ಯಮಾನ ಇದಾಗಿದೆ. ದುಬೈಯಲ್ಲಿ ವ್ಯಾಪಕ ಪ್ರವಾಹದ ಸ್ಥಿತಿ ಉಂಟಾಗಿದ್ದು 1.5 ವರ್ಷ ಸುರಿಯುವ ಮಳೆ ಒಂದೇ ದಿನ ಸುರಿದಿದೆ. 24 ಗಂಟೆಗಳಲ್ಲಿ ಸುಮಾರು 5 ಇಂಚಿನಷ್ಟು ಮಳೆಯಾಗಿದೆ ‘ ಎಂದು ರಾಷ್ಟ್ರೀಯ ಹವಾಮಾನ ಕೇಂದ್ರ (ಎನ್‍ಸಿಎಂ) ಟ್ವೀಟ್(ಎಕ್ಸ್) ಮಾಡಿದೆ. ಯುಎಇಯ 7 ಎಮಿರೇಟ್ಸ್‍ಗಳಲ್ಲಿ ಒಂದಾಗಿರುವ ದುಬೈನಲ್ಲಿರುವ ಮಾಲ್‍ಗಳು, ವಿಮಾನ ನಿಲ್ದಾಣಗಳು ಜಲಾವೃತಗೊಂಡಿವೆ. ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರವಾಹದ ಕಾರಣದಿಂದ ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಗಿದೆ. ತೀರಾ ಅಗತ್ಯವಿದ್ದರೆ ಮಾತ್ರ ವಿಮಾನ ನಿಲ್ದಾಣಕ್ಕೆ ಬರುವಂತೆ ಪ್ರಯಾಣಿಕರಿಗೆ ಸೂಚಿಸಲಾಗಿದೆ. ದುಬೈನ ಪ್ರಮುಖ ಮಾಲ್‍ಗಳಾದ ದುಬೈ ಮಾಲ್ ಮತ್ತು ಮಾಲ್ ಆಫ್ ಎಮಿರೇಟ್ಸ್ ಎರಡರಲ್ಲೂ ನೀರು ನುಗ್ಗಿದ್ದರಿಂದ ಸಮಸ್ಯೆಯಾಗಿದೆ. ಮೆಟ್ರೋ ನಿಲ್ದಾಣಗಳಲ್ಲೂ ಮೊಣಕಾಲು ಮಟ್ಟದಲ್ಲಿ ನೀರು ನಿಂತಿದೆ.

ಯುಎಇಯ ಕೆಲವು ಭಾಗಗಳಲ್ಲಿ ಸುರಿದ ಭಾರೀ ಮಳೆ ಮತ್ತು ದುಬೈಯಲ್ಲಿ ಪ್ರವಾಹದಂತಹ ಸ್ಥಿತಿ ನೆಲೆಸಿರುವ ಹಿನ್ನೆಲೆಯಲ್ಲಿ ದುಬೈಯಲ್ಲಿರುವ ಭಾರತೀಯ ಕಾನ್ಸುಲೇಟ್ ಭಾರತೀಯ ಪ್ರಜೆಗಳಿಗೆ ಸಹಾಯವಾಣಿ ಸಂಖ್ಯೆಗಳನ್ನು ನೀಡಿದೆ. (+971501205172, +971569950590, +971507347676, +971585754213).

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

12 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

13 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

13 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

13 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

13 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

15 hours ago