Featured

ದುಬೈ : ಕೊರೊನಾ ಹೆಚ್ಚಳ ಪ್ರಕರಣ ; ಒಂದು ತಿಂಗಳು ಅನಾವಶ್ಯಕ ಸರ್ಜರಿ ಹಾಗೂ ರೆಸ್ಟೋರೆಂಟ್‌ಗಳಲ್ಲಿ ವಿನೋದ ಕಾರ್ಯಕ್ರಮಗಳಿಗೆ ಬ್ರೇಕ್‌ -Vishwanews24

ದುಬೈ : ಕೊರೊನಾ ಹೆಚ್ಚಳ ಪ್ರಕರಣ ; ಒಂದು ತಿಂಗಳು ಅನಾವಶ್ಯಕ ಸರ್ಜರಿ ಹಾಗೂ ರೆಸ್ಟೋರೆಂಟ್‌ಗಳಲ್ಲಿ ವಿನೋದ ಕಾರ್ಯಕ್ರಮಗಳಿಗೆ ಬ್ರೇಕ್‌ -Vishwanews24

ದುಬೈ: ದುಬೈನಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಅನಗತ್ಯ ಸರ್ಜರಿ ಹಾಗೂ ಹೊಟೇಲ್‌ ಹಾಗೂ ರೆಸ್ಟೋರೆಂಟ್‌ಗಳಲ್ಲಿ ವಿನೋದ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕಿದೆ. ಹೊಸ ವರ್ಷಾಚರಣೆಗೆ ವಿಶ್ವದ ವಿವಿಧ ಭಾಗದಗಳಿಂದ ದುಬೈಗೆ ಸಾವಿರಾರು ಮಂದಿ ಬಂದಿದ್ದು, ಇದಾದ ಬಳಿಕ ಅಲ್ಲಿ ಕೊರೊನಾ ವೈರಸ್‌ ಪ್ರಕರಣ ಹೆಚ್ಚಳವಾಗಿದೆ.

ಒಂದು ತಿಂಗಳ ಅವಧಿಗೆ ಅನಗತ್ಯ ಸರ್ಜರಿ ಹಾಗೂ ಮುಂದಿನ ಆದೇಶದ ವರೆಗೆ ಹೊಟೇಲ್‌ ಹಾಗೂ ರೆಸ್ಟೋರೆಂಟ್‌ಗಳಲ್ಲಿ ವಿನೋದ ಕಾರ್ಯಕ್ರಮ ಆಯೋಜಿಸುವುದಕ್ಕೆ ಸರ್ಕಾರ ಬ್ರೇಕ್‌ ಹಾಕಿದೆ.

ಹೊಸ ವರ್ಷ ಆಚರಣೆಗೆ ಕೋವಿಡ್‌ ನಿಯಮಾವಳಿಗಳನ್ನು ಸಡಿಲಗೊಳಿಸಿದ್ದ ದುಬೈನಲ್ಲಿ ಹೋಟೆಲ್‌ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರ ತೊಡಗಿದ್ದರು. ಕೋವಿಡ್‌ ನಿಯಮಾವಳಿಗಳನ್ನು ಗಾಳಿಗೆ ತೂರಿ ಜನ ಸೇರ ತೊಡಗಿದ್ದರು. ಇದರ ಪರಿಣಾಮ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳವಾಗಿದೆ. ಇದರ ಬೆನ್ನಲ್ಲೇ, ದುಬೈ ಸರ್ಕಾರ ಮತ್ತೆ ನಿರ್ಬಂಧ ಹೇರಿದೆ.

ಉಡುಪಿ: ಕಾರ್ಣಿಕ ಮೆರೆದ ಮೂಡುಸಗ್ರಿ ಸನ್ನಿಧಾನದ ಕೊರಗಜ್ಜ ಮತ್ತು ಕಲ್ಕುಡ ಶಕ್ತಿಗಳು -Vishwanews24

ದುಬೈ ಸಹಿತ ಯುಎಇಯಲ್ಲಿ ಜನವರಿ 12 ರಂದು ಹೊಸದಾಗಿ 3,000 ಕೊರೋನಾ ಪ್ರಕರಣಗಳು ಪತ್ತೆಯಾಗಿತ್ತು. ಬಳಿಕ ಅದು ಏರಿಕೆಯಾಗಿ, ಈಗ ಪ್ರತಿನಿತ್ಯ 3,500ಕ್ಕೂ ಹೆಚ್ಚಿನ ಪ್ರಕರಣ ದಾಖಲಾಗುತ್ತಿದೆ. ಹೀಗಾಗಿ ದುಬೈ ಅನಿವಾರ್ಯವಾಗಿ ಮತ್ತೆ ನಿಯಮಗಳನ್ನು ಬಿಗಿಗೊಳಿಸಿದೆ.

ಮಾಸ್ಕ್‌ ಧಾರಣೆ ಮತ್ತು ದೈಹಿಕ ಅಂತರ ಬಿಟ್ಟು ಉಳಿದೆಲ್ಲಾ ಕೊರೊನಾ ನಿಯಮಾವಳಿಗಳನ್ನು ಸಡಿಲಗೊಳಿಸಿದ್ದ ದುಬೈ ಈಗ ಬೆಲೆ ತೆತ್ತಿದೆ. ದೈನಂದಿನ ಸೋಂಕು ಹೆಚ್ಚಳವಾಗುತ್ತಿದ್ದಂತೆಯೇ ದುಬೈನಿಂದ ಆಗಮಿಸುವ ಪ್ರಯಾಣಿಕರಿಗೆ ಬ್ರಿಟನ್ ನಿರ್ಬಂಧ ವಿಧಿಸಿದೆ.

ವೀರ ಹನುಮಂತನ ಚಿತ್ರದ ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ಬ್ರೆಜಿಲ್ ಅಧ್ಯಕ್ಷ -Vishwanews24

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

24 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago