ಮಂಗಳೂರು: ಕಳೆದ 48 ಗಂಟೆಗಳಲ್ಲಿ ದುಬೈ ಮತ್ತು ನೆರೆಯ ಮಧ್ಯಪ್ರಾಚ್ಯ ದೇಶಗಳಲ್ಲಿ ಭಾರೀ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಮಂಗಳೂರು- ದುಬೈ ಮಾರ್ಗದ ನಾಲ್ಕು ವಿಮಾನಗಳನ್ನು ಬುಧವಾರ ರದ್ದುಗೊಳಿಸಲಾಯಿತು.
ತಿರುಚಿರಾಪಳ್ಳಿಯಿಂದ ಮಂಗಳೂರು ಮಾರ್ಗದ ಮತ್ತೊಂದು ವಿಮಾನವನ್ನು ಸಹ ರದ್ದುಗೊಳಿಸಲಾಗಿದೆ. ಇಲ್ಲಿಂದ ಜೆಡ್ಡಾಕ್ಕೆ ತೆರಳುವ ವಿಮಾನ ಹಾರಾಟದಲ್ಲಿ ವಿಳಂಬವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರದ್ದುಗೊಳಿಸಲಾದ ವಿಮಾನಗಳು ಏರ್ ಇಂಡಿಯಾ ಎಕ್ಸ್ಪ್ರೆಸ್ ಕಂಪನಿಗೆ ಸೇರಿದ್ದಾಗಿವೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ದುಬೈನಿಂದ ಮಂಗಳೂರಿಗೆ ತೆರಳಬೇಕಿದ್ದ ಫ್ಲೈಟ್ ನಂಬರ್ 814, ಮಂಗಳೂರಿನಿಂದ ದುಬೈಗೆ ಹೊರಡಬೇಕಿದ್ದ ಫ್ಲೈಟ್ ನಂಬರ್ 813, ದುಬೈನಿಂದ ಮಂಗಳೂರಿಗೆ ತೆರಳಬೇಕಿದ್ದ ವಿಮಾನ 384 ಮತ್ತು ಮಂಗಳೂರಿನಿಂದ ದುಬೈಗೆ ಹೊರಡಬೇಕಿದ್ದ ಫ್ಲೈಟ್ ನಂಬರ್ 383 ಅನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅದೇ ರೀತಿ ಮಂಗಳೂರಿನಿಂದ ಜಿದ್ದಾಗೆ ತೆರಳುವ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ವಿಳಂಬವಾಗಿದೆ. ಮತ್ತೊಂದೆಡೆ, ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವನ್ನು ಗುರುವಾರವೂ ರದ್ದುಗೊಳಿಸಲಾಗಿದೆ. ಜೆಡ್ಡಾದಿಂದ ಮಂಗಳೂರಿಗೆ ತೆರಳಬೇಕಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಸಂಖ್ಯೆ 796 ಮತ್ತು ಮಂಗಳೂರಿನಿಂದ ತಿರುಚಿರಾಪಳ್ಳಿಗೆ ಹೊರಡಬೇಕಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಕೂಡಾ ವಿಳಂಬವಾಗಲಿದೆ.
ಏಪ್ರಿಲ್ 15 ರ ಮಧ್ಯರಾತ್ರಿಯಿಂದ, ದುಬೈನ ಅನೇಕ ಸ್ಥಳಗಳಲ್ಲಿ ಭಾರೀ ನೀರು ನಿಂತಿದ್ದು, ನಿಯಮಿತ ಚಟುವಟಿಕೆಗಳು ಮತ್ತು ವಿಮಾನ ಪ್ರಯಾಣವನ್ನು ಅಡ್ಡಿಪಡಿಸಿದೆ. ದುಬೈನಲ್ಲಿ ಮಂಗಳವಾರ ಕೇವಲ 12 ಗಂಟೆಗಳಲ್ಲಿ ದಾಖಲೆಯ 100 ಮಿಮೀ ಮಳೆಯಾಗಿದೆ ಎಂದು ವರದಿಗಳು ತಿಳಿಸಿವೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…