ಮಂಗಳೂರು: ಕಳೆದ 48 ಗಂಟೆಗಳಲ್ಲಿ ದುಬೈ ಮತ್ತು ನೆರೆಯ ಮಧ್ಯಪ್ರಾಚ್ಯ ದೇಶಗಳಲ್ಲಿ ಭಾರೀ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಮಂಗಳೂರು- ದುಬೈ ಮಾರ್ಗದ ನಾಲ್ಕು ವಿಮಾನಗಳನ್ನು ಬುಧವಾರ ರದ್ದುಗೊಳಿಸಲಾಯಿತು.
ತಿರುಚಿರಾಪಳ್ಳಿಯಿಂದ ಮಂಗಳೂರು ಮಾರ್ಗದ ಮತ್ತೊಂದು ವಿಮಾನವನ್ನು ಸಹ ರದ್ದುಗೊಳಿಸಲಾಗಿದೆ. ಇಲ್ಲಿಂದ ಜೆಡ್ಡಾಕ್ಕೆ ತೆರಳುವ ವಿಮಾನ ಹಾರಾಟದಲ್ಲಿ ವಿಳಂಬವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರದ್ದುಗೊಳಿಸಲಾದ ವಿಮಾನಗಳು ಏರ್ ಇಂಡಿಯಾ ಎಕ್ಸ್ಪ್ರೆಸ್ ಕಂಪನಿಗೆ ಸೇರಿದ್ದಾಗಿವೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ದುಬೈನಿಂದ ಮಂಗಳೂರಿಗೆ ತೆರಳಬೇಕಿದ್ದ ಫ್ಲೈಟ್ ನಂಬರ್ 814, ಮಂಗಳೂರಿನಿಂದ ದುಬೈಗೆ ಹೊರಡಬೇಕಿದ್ದ ಫ್ಲೈಟ್ ನಂಬರ್ 813, ದುಬೈನಿಂದ ಮಂಗಳೂರಿಗೆ ತೆರಳಬೇಕಿದ್ದ ವಿಮಾನ 384 ಮತ್ತು ಮಂಗಳೂರಿನಿಂದ ದುಬೈಗೆ ಹೊರಡಬೇಕಿದ್ದ ಫ್ಲೈಟ್ ನಂಬರ್ 383 ಅನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅದೇ ರೀತಿ ಮಂಗಳೂರಿನಿಂದ ಜಿದ್ದಾಗೆ ತೆರಳುವ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ವಿಳಂಬವಾಗಿದೆ. ಮತ್ತೊಂದೆಡೆ, ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವನ್ನು ಗುರುವಾರವೂ ರದ್ದುಗೊಳಿಸಲಾಗಿದೆ. ಜೆಡ್ಡಾದಿಂದ ಮಂಗಳೂರಿಗೆ ತೆರಳಬೇಕಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಸಂಖ್ಯೆ 796 ಮತ್ತು ಮಂಗಳೂರಿನಿಂದ ತಿರುಚಿರಾಪಳ್ಳಿಗೆ ಹೊರಡಬೇಕಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಕೂಡಾ ವಿಳಂಬವಾಗಲಿದೆ.
ಏಪ್ರಿಲ್ 15 ರ ಮಧ್ಯರಾತ್ರಿಯಿಂದ, ದುಬೈನ ಅನೇಕ ಸ್ಥಳಗಳಲ್ಲಿ ಭಾರೀ ನೀರು ನಿಂತಿದ್ದು, ನಿಯಮಿತ ಚಟುವಟಿಕೆಗಳು ಮತ್ತು ವಿಮಾನ ಪ್ರಯಾಣವನ್ನು ಅಡ್ಡಿಪಡಿಸಿದೆ. ದುಬೈನಲ್ಲಿ ಮಂಗಳವಾರ ಕೇವಲ 12 ಗಂಟೆಗಳಲ್ಲಿ ದಾಖಲೆಯ 100 ಮಿಮೀ ಮಳೆಯಾಗಿದೆ ಎಂದು ವರದಿಗಳು ತಿಳಿಸಿವೆ.
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…