Featured

ದುಬೈ ಪ್ರವಾಹ :  ಮಂಗಳೂರು-ದುಬೈ ನಾಲ್ಕು ವಿಮಾನಗಳು ರದ್ದು, ಪ್ರಯಾಣಿಕರಿಗೆ ತೊಂದರೆ – Vishwanews24

ದುಬೈ ಪ್ರವಾಹ :  ಮಂಗಳೂರು-ದುಬೈ ನಾಲ್ಕು ವಿಮಾನಗಳು ರದ್ದು, ಪ್ರಯಾಣಿಕರಿಗೆ ತೊಂದರೆ

ಮಂಗಳೂರು: ಕಳೆದ 48 ಗಂಟೆಗಳಲ್ಲಿ ದುಬೈ ಮತ್ತು ನೆರೆಯ ಮಧ್ಯಪ್ರಾಚ್ಯ ದೇಶಗಳಲ್ಲಿ ಭಾರೀ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಮಂಗಳೂರು- ದುಬೈ ಮಾರ್ಗದ ನಾಲ್ಕು ವಿಮಾನಗಳನ್ನು ಬುಧವಾರ ರದ್ದುಗೊಳಿಸಲಾಯಿತು.

ತಿರುಚಿರಾಪಳ್ಳಿಯಿಂದ ಮಂಗಳೂರು ಮಾರ್ಗದ ಮತ್ತೊಂದು ವಿಮಾನವನ್ನು ಸಹ ರದ್ದುಗೊಳಿಸಲಾಗಿದೆ. ಇಲ್ಲಿಂದ ಜೆಡ್ಡಾಕ್ಕೆ ತೆರಳುವ ವಿಮಾನ ಹಾರಾಟದಲ್ಲಿ ವಿಳಂಬವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರದ್ದುಗೊಳಿಸಲಾದ ವಿಮಾನಗಳು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಕಂಪನಿಗೆ ಸೇರಿದ್ದಾಗಿವೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ದುಬೈನಿಂದ ಮಂಗಳೂರಿಗೆ ತೆರಳಬೇಕಿದ್ದ ಫ್ಲೈಟ್ ನಂಬರ್​ 814, ಮಂಗಳೂರಿನಿಂದ ದುಬೈಗೆ ಹೊರಡಬೇಕಿದ್ದ ಫ್ಲೈಟ್ ನಂಬರ್​ 813, ದುಬೈನಿಂದ ಮಂಗಳೂರಿಗೆ ತೆರಳಬೇಕಿದ್ದ ವಿಮಾನ 384 ಮತ್ತು ಮಂಗಳೂರಿನಿಂದ ದುಬೈಗೆ ಹೊರಡಬೇಕಿದ್ದ ಫ್ಲೈಟ್ ನಂಬರ್​ 383 ಅನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅದೇ ರೀತಿ ಮಂಗಳೂರಿನಿಂದ ಜಿದ್ದಾಗೆ ತೆರಳುವ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ವಿಳಂಬವಾಗಿದೆ. ಮತ್ತೊಂದೆಡೆ, ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವನ್ನು ಗುರುವಾರವೂ ರದ್ದುಗೊಳಿಸಲಾಗಿದೆ. ಜೆಡ್ಡಾದಿಂದ ಮಂಗಳೂರಿಗೆ ತೆರಳಬೇಕಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಸಂಖ್ಯೆ 796 ಮತ್ತು ಮಂಗಳೂರಿನಿಂದ ತಿರುಚಿರಾಪಳ್ಳಿಗೆ ಹೊರಡಬೇಕಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಕೂಡಾ ವಿಳಂಬವಾಗಲಿದೆ.

ಏಪ್ರಿಲ್ 15 ರ ಮಧ್ಯರಾತ್ರಿಯಿಂದ, ದುಬೈನ ಅನೇಕ ಸ್ಥಳಗಳಲ್ಲಿ ಭಾರೀ ನೀರು ನಿಂತಿದ್ದು, ನಿಯಮಿತ ಚಟುವಟಿಕೆಗಳು ಮತ್ತು ವಿಮಾನ ಪ್ರಯಾಣವನ್ನು ಅಡ್ಡಿಪಡಿಸಿದೆ. ದುಬೈನಲ್ಲಿ ಮಂಗಳವಾರ ಕೇವಲ 12 ಗಂಟೆಗಳಲ್ಲಿ ದಾಖಲೆಯ 100 ಮಿಮೀ ಮಳೆಯಾಗಿದೆ ಎಂದು ವರದಿಗಳು ತಿಳಿಸಿವೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago