ದುರಹಂಕಾರದ ಕುರ್ಚಿಯಿಂದ ಕೆಳಗಿಳಿದು ರೈತರಿಗೆ ಅವರ ಹಕ್ಕುಗಳನ್ನು ನೀಡುವ ಬಗ್ಗೆ ಯೋಚಿಸಿ : ಪ್ರಧಾನಿಗೆ ರಾಹುಲ್ -Vishwanews24
ದುರಹಂಕಾರದ ಕುರ್ಚಿಯಿಂದ ಕೆಳಗಿಳಿದು ರೈತರಿಗೆ ಅವರ ಹಕ್ಕುಗಳನ್ನು ನೀಡುವ ಬಗ್ಗೆ ಯೋಚಿಸಿ : ಪ್ರಧಾನಿಗೆ ರಾಹುಲ್ -Vishwanews24
ನವದೆಹಲಿ : ದೇಶದ ಬೆನ್ನೆಲುಬು ರೈತ ಅವರ ಅಳಲನ್ನು ಆಲಿಸುವುದು ಸರ್ಕಾರದ ಕೆಲಸ ಎಂದು ರಾಗಾ ಮೋದಿಗೆ ಸಲಹೆ ನೀಡಿದ್ದಾರೆ. ಕೇಂದ್ರದ ಹೊಸ ಕೃಷಿ-ಮಾರುಕಟ್ಟೆ ಕಾನೂನುಗಳ ವಿರುದ್ಧ ಪಂಜಾಬ್ ಮತ್ತು ಹರಿಯಾಣ ಮೂಲದ ರೈತರು ರಾಷ್ಟ್ರ ರಾಜಧಾನಿಯ ಸಿಂಗು, ಟಿಕ್ರಿ ಮತ್ತು ಗಾಜಿಪುರ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ರೈತರ ಕಠಿಣ ಪರಿಶ್ರಮಕ್ಕಾಗಿ ನಾವೆಲ್ಲರೂ ಋಣಿಯಾಗಿದ್ದೇವೆ. ಅವರಿಗೆ ನ್ಯಾಯ ಒದಗಿಸುವ ಮೂಲಕ ಮಾತ್ರ ಈ ಋಣವನ್ನು ತೀರಿಸಲು ಸಾಧ್ಯ” ಎಂದಿದ್ದಾರೆ.
“ರೈತರು ರಸ್ತೆ, ಹೊಲಗಳಲ್ಲಿ ಕುಳಿತು ತಮ್ಮ ಹಕ್ಕುಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಾವೆಲ್ಲರೂ ಕೂಡಾ ರೈತರ ಕಠಿಣ ಪರಿಶ್ರಮಕ್ಕೆ ಋಣಿಯಾಗಿದ್ದೇವೆ. ನ್ಯಾಯ ಸಲ್ಲಿಸುವ ಮೂಲಕ ನಾವು ಅವರ ಋಣವನ್ನು ತೀರಿಸಬೇಕು. ಇದರ ಬದಲಾಗಿ ಅವರಿಗೆ ಲಾಠಿಯಿಂದ ಹೊಡೆದು, ಆಶ್ರುವಾಯು ಬಳಸುವ ಮೂಲಕ ಅವರ ಮೇಲೆ ದೌರ್ಜನ್ಯವೆಸಗುವುದು ಸರಿಯಲ್ಲ” ಎಂದು ತಿಳಿಸಿದ್ದಾರೆ.
“ಮೊದಲು ಎಚ್ಚರಗೊಂಡು ದುರಹಂಕಾರದ ಕುರ್ಚಿಯಿಂದ ಕೆಳಗಿಳಿದು ರೈತರಿಗೆ ಅವರ ಹಕ್ಕುಗಳನ್ನು ನೀಡುವ ಬಗ್ಗೆ ಯೋಚಿಸಿ” ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿ ಭಾಗಗಳಲ್ಲಿ ಕೆಲವು ದಿನಗಳಿಂದ ನೂರಾರು ರೈತರು ಪ್ರತಿಭಟನೆ ಮಾಡುತ್ತಿದ್ದಾರೆ.
अन्नदाता सड़कों-मैदानों में धरना दे रहे हैं,
और
‘झूठ’ टीवी पर भाषण!किसान की मेहनत का हम सब पर क़र्ज़ है।
ये क़र्ज़ उन्हें न्याय और हक़ देकर ही उतरेगा, न कि उन्हें दुत्कार कर, लाठियाँ मारकर और आंसू गैस चलाकर।
जागिए, अहंकार की कुर्सी से उतरकर सोचिए और किसान का अधिकार दीजिए।
— Rahul Gandhi (@RahulGandhi) December 1, 2020
