ನವದೆಹಲಿ : ದೇಶದ ಬೆನ್ನೆಲುಬು ರೈತ ಅವರ ಅಳಲನ್ನು ಆಲಿಸುವುದು ಸರ್ಕಾರದ ಕೆಲಸ ಎಂದು ರಾಗಾ ಮೋದಿಗೆ ಸಲಹೆ ನೀಡಿದ್ದಾರೆ. ಕೇಂದ್ರದ ಹೊಸ ಕೃಷಿ-ಮಾರುಕಟ್ಟೆ ಕಾನೂನುಗಳ ವಿರುದ್ಧ ಪಂಜಾಬ್ ಮತ್ತು ಹರಿಯಾಣ ಮೂಲದ ರೈತರು ರಾಷ್ಟ್ರ ರಾಜಧಾನಿಯ ಸಿಂಗು, ಟಿಕ್ರಿ ಮತ್ತು ಗಾಜಿಪುರ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ರೈತರ ಕಠಿಣ ಪರಿಶ್ರಮಕ್ಕಾಗಿ ನಾವೆಲ್ಲರೂ ಋಣಿಯಾಗಿದ್ದೇವೆ. ಅವರಿಗೆ ನ್ಯಾಯ ಒದಗಿಸುವ ಮೂಲಕ ಮಾತ್ರ ಈ ಋಣವನ್ನು ತೀರಿಸಲು ಸಾಧ್ಯ” ಎಂದಿದ್ದಾರೆ.
“ರೈತರು ರಸ್ತೆ, ಹೊಲಗಳಲ್ಲಿ ಕುಳಿತು ತಮ್ಮ ಹಕ್ಕುಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಾವೆಲ್ಲರೂ ಕೂಡಾ ರೈತರ ಕಠಿಣ ಪರಿಶ್ರಮಕ್ಕೆ ಋಣಿಯಾಗಿದ್ದೇವೆ. ನ್ಯಾಯ ಸಲ್ಲಿಸುವ ಮೂಲಕ ನಾವು ಅವರ ಋಣವನ್ನು ತೀರಿಸಬೇಕು. ಇದರ ಬದಲಾಗಿ ಅವರಿಗೆ ಲಾಠಿಯಿಂದ ಹೊಡೆದು, ಆಶ್ರುವಾಯು ಬಳಸುವ ಮೂಲಕ ಅವರ ಮೇಲೆ ದೌರ್ಜನ್ಯವೆಸಗುವುದು ಸರಿಯಲ್ಲ” ಎಂದು ತಿಳಿಸಿದ್ದಾರೆ.
“ಮೊದಲು ಎಚ್ಚರಗೊಂಡು ದುರಹಂಕಾರದ ಕುರ್ಚಿಯಿಂದ ಕೆಳಗಿಳಿದು ರೈತರಿಗೆ ಅವರ ಹಕ್ಕುಗಳನ್ನು ನೀಡುವ ಬಗ್ಗೆ ಯೋಚಿಸಿ” ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿ ಭಾಗಗಳಲ್ಲಿ ಕೆಲವು ದಿನಗಳಿಂದ ನೂರಾರು ರೈತರು ಪ್ರತಿಭಟನೆ ಮಾಡುತ್ತಿದ್ದಾರೆ.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…