Featured

ದುರಹಂಕಾರದ ಕುರ್ಚಿಯಿಂದ ಕೆಳಗಿಳಿದು ರೈತರಿಗೆ ಅವರ ಹಕ್ಕುಗಳನ್ನು ನೀಡುವ ಬಗ್ಗೆ ಯೋಚಿಸಿ : ಪ್ರಧಾನಿಗೆ ರಾಹುಲ್ -Vishwanews24

ದುರಹಂಕಾರದ ಕುರ್ಚಿಯಿಂದ ಕೆಳಗಿಳಿದು ರೈತರಿಗೆ ಅವರ ಹಕ್ಕುಗಳನ್ನು ನೀಡುವ ಬಗ್ಗೆ ಯೋಚಿಸಿ : ಪ್ರಧಾನಿಗೆ ರಾಹುಲ್ -Vishwanews24

ನವದೆಹಲಿ : ದೇಶದ ಬೆನ್ನೆಲುಬು ರೈತ ಅವರ ಅಳಲನ್ನು ಆಲಿಸುವುದು ಸರ್ಕಾರದ ಕೆಲಸ ಎಂದು ರಾಗಾ ಮೋದಿಗೆ ಸಲಹೆ ನೀಡಿದ್ದಾರೆ. ಕೇಂದ್ರದ ಹೊಸ ಕೃಷಿ-ಮಾರುಕಟ್ಟೆ ಕಾನೂನುಗಳ ವಿರುದ್ಧ ಪಂಜಾಬ್ ಮತ್ತು ಹರಿಯಾಣ ಮೂಲದ ರೈತರು ರಾಷ್ಟ್ರ ರಾಜಧಾನಿಯ ಸಿಂಗು, ಟಿಕ್ರಿ ಮತ್ತು ಗಾಜಿಪುರ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ರೈತರ ಕಠಿಣ ಪರಿಶ್ರಮಕ್ಕಾಗಿ ನಾವೆಲ್ಲರೂ ಋಣಿಯಾಗಿದ್ದೇವೆ. ಅವರಿಗೆ ನ್ಯಾಯ ಒದಗಿಸುವ ಮೂಲಕ ಮಾತ್ರ ಈ ಋಣವನ್ನು ತೀರಿಸಲು ಸಾಧ್ಯ” ಎಂದಿದ್ದಾರೆ.

“ರೈತರು ರಸ್ತೆ, ಹೊಲಗಳಲ್ಲಿ ಕುಳಿತು ತಮ್ಮ ಹಕ್ಕುಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಾವೆಲ್ಲರೂ ಕೂಡಾ ರೈತರ ಕಠಿಣ ಪರಿಶ್ರಮಕ್ಕೆ ಋಣಿಯಾಗಿದ್ದೇವೆ. ನ್ಯಾಯ ಸಲ್ಲಿಸುವ ಮೂಲಕ ನಾವು ಅವರ ಋಣವನ್ನು ತೀರಿಸಬೇಕು. ಇದರ ಬದಲಾಗಿ ಅವರಿಗೆ ಲಾಠಿಯಿಂದ ಹೊಡೆದು, ಆಶ್ರುವಾಯು ಬಳಸುವ ಮೂಲಕ ಅವರ ಮೇಲೆ ದೌರ್ಜನ್ಯವೆಸಗುವುದು ಸರಿಯಲ್ಲ” ಎಂದು ತಿಳಿಸಿದ್ದಾರೆ.

“ಮೊದಲು ಎಚ್ಚರಗೊಂಡು ದುರಹಂಕಾರದ ಕುರ್ಚಿಯಿಂದ ಕೆಳಗಿಳಿದು ರೈತರಿಗೆ ಅವರ ಹಕ್ಕುಗಳನ್ನು ನೀಡುವ ಬಗ್ಗೆ ಯೋಚಿಸಿ” ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿ ಭಾಗಗಳಲ್ಲಿ ಕೆಲವು ದಿನಗಳಿಂದ ನೂರಾರು ರೈತರು ಪ್ರತಿಭಟನೆ ಮಾಡುತ್ತಿದ್ದಾರೆ.

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

12 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

16 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

16 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

17 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

17 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

18 hours ago