Featured

ದುರಾಡಳಿತ, ಭ್ರಷ್ಟಾಚಾರ, ಅಧಿಕಾರಕ್ಕಾಗಿ ಕಿತ್ತಾಟದಲ್ಲೇ ಬಿಜೆಪಿ ನಾಯಕರು ಕಾಲಹರಣ ಮಾಡುತ್ತಿದ್ದಾರೆ : ಡಿ ಕೆ ಶಿವಕುಮಾರ್ -Vishwanews24

ದುರಾಡಳಿತ, ಭ್ರಷ್ಟಾಚಾರ, ಅಧಿಕಾರಕ್ಕಾಗಿ ಕಿತ್ತಾಟದಲ್ಲೇ ಬಿಜೆಪಿ ನಾಯಕರು ಕಾಲಹರಣ ಮಾಡುತ್ತಿದ್ದಾರೆ : ಡಿ ಕೆ ಶಿವಕುಮಾರ್ -Vishwanews24

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದವರ ಲೆಕ್ಕವನ್ನೂ ಸರ್ಕಾರಕ್ಕೆ ಸರಿಯಾಗಿ ಕೊಡಲಾಗುತ್ತಿಲ್ಲ. ಸುಳ್ಳು ಲೆಕ್ಕಗಳನ್ನು ಕೊಟ್ಟು ಮೃತಪಟ್ಟವರ ಸಂಖ್ಯೆಯನ್ನೂ ಮುಚ್ಚಿಡಲಾಗುತ್ತಿದೆ. ಜನರು ಬದುಕಿಗಾಗಿ ಹೋರಾಟ ನಡೆಸಿದ್ದರೆ ಬಿಜೆಪಿ ನಾಯಕರು ಅಧಿಕಾರಕ್ಕಾಗಿ ಕಿತ್ತಾಡುತ್ತಿದ್ದಾರೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, “ಕರ್ನಾಟಕದಲ್ಲಿ ಅನೇಕ ಮಂದಿ ಇಂದು ಉದ್ಯೋಗಕ್ಕಾಗಿ ಪರದಾಡುತ್ತಿದ್ದು, ಬಿಜೆಪಿ ಯುದ್ಧಕಾಂಡ ಜನರ ಕರ್ಮಕಾಂಡ ಎಂಬಂತಾಗಿದೆ ಈಗೀನ ರಾಜ್ಯದ ಪರಿಸ್ಥಿತಿ. ದುರಾಡಳಿತ, ಭ್ರಷ್ಟಾಚಾರ, ಅಧಿಕಾರಕ್ಕಾಗಿ ಕಿತ್ತಾಟದಲ್ಲೇ ಬಿಜೆಪಿ ನಾಯಕರು ಕಾಲಹರಣ ಮಾಡುತ್ತಿದ್ದಾರೆ. ಮೊದಲು ವಿಧಾನಮಂಡಲ ಅಧಿವೇಶನ ಕರೆದು ರಾಜ್ಯದಲ್ಲಿ ಏನೇನು ನಡೆಯುತ್ತಿದೆ ಎಂಬುದರ ಬಗ್ಗೆ ಅಧಿವೇಶನದಲ್ಲಿ ವಿಸ್ತೃತ ಚರ್ಚೆ ನಡೆಸಬೇಕಿದೆ” ಎಂದರು.

ಇನ್ನು ಕರ್ನಾಟಕದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಬಗ್ಗೆ ಸರ್ಕಾರ ಸರಿಯಾಗಿ ಮಾಹಿತಿ ನೀಡದೇ ಸುಳ್ಳು ಲೆಕ್ಕ ನೀಡುತ್ತಿದ್ದು, ಕೊರೊನಾ ಸಾವಿನ ಲೆಕ್ಕವೇ ಸರಿಯಾಗಿ ಆಡಿಟ್ ಆಗುತ್ತಿಲ್ಲ. ಹಾಗಾಗಿ ಕಾಂಗ್ರೆಸ್ ಕಾರ್ಯಕರ್ತರೇ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಡೀಟ್ ಮಾಡಿ, ಸಾವಿನ ಪ್ರಮಾಣಪತ್ರ ಸೇರಿ ಎಲ್ಲಾ ಮಾಹಿತಿ ಕಲೆ ಹಾಕಿ” ಎಂದು ಕರೆ ನೀಡಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

2 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

4 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

5 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

5 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

5 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

6 hours ago