Featured

ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ರಾಜೀನಾಮೆ ನೀಡುತ್ತೇನೆ : ರೇಣುಕಾಚಾರ್ಯ – Vishwanews24

ನಮ್ಮ ಹಿಂದೂ ಕಾರ್ಯಕರ್ತರನ್ನು ರಕ್ಷಿಸಲು ನಮ್ಮಿಂದ ಸಾಧ್ಯವಾಗದಿದ್ದರೆ ನಾವು ಅಧಿಕಾರದಲ್ಲಿದ್ದೂ ಏನು ಪ್ರಯೋಜನ?

ನನಗೆ ವೈಯಕ್ತಿಕವಾಗಿ ಅಧಿಕಾರಕ್ಕಿಂತ ನಮ್ಮ ಹಿಂದೂ ಕಾರ್ಯಕರ್ತರ ರಕ್ಷಣೆಯೇ ಮುಖ್ಯ..

ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ರಾಜೀನಾಮೆ ನೀಡುತ್ತೇನೆ

ಓಂ ಶಾಂತಿ ಎನ್ನುವ ನಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್ ನಿಂದ ಏನೂ ಪ್ರಯೋಜನವಿಲ್ಲ..

ಹಿಂದೂ ಕಾರ್ಯಕರ್ತರ ನಂಬಿಕೆ ಉಳಿಸಿಕೊಳ್ಳ ಬೇಕಾದರೆ ದುಷ್ಕರ್ಮಿಗಳನ್ನು ನಡು ರಸ್ತೆಯಲ್ಲಿಯೇ ಎನ್ಕೌಂಟರ್ ಮಾಡಬೇಕು..

ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೈದವರ ವಿರುದ್ಧ ನಿರ್ದಾಕ್ಷಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ನಾನು ಈ ಸರ್ಕಾರದಲ್ಲಿ ಮುಂದುವರಿಯುತ್ತೇನೆ, ಇಲ್ಲವಾದರೆ ರಾಜೀನಾಮೆ ನೀಡುತ್ತೇನೆ ಎಂದು ಸಾಸಕ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.

ಆರ್.ಟಿ.ನಗರದ ನಿವಾಸದಲ್ಲಿ ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಎಲ್ಲ ತ್ಯಾಗಕ್ಕೂ ಸಿದ್ಧ. ನಾನು ರಾಜೀನಾಮೆ ನೀಡಲು ಸಿದ್ಧ. ಕಾರ್ಯಕರ್ತರು ಏನ್ ಹೇಳ್ತಾರೆ ಅದನ್ನ ಕೇಳ್ತೀನಿ. ಕ್ಷೇತ್ರಕ್ಕೆ ನಾಳೆ ಹೋಗ್ತೀನಿ, ಕಾರ್ಯಕರ್ತರ ಹೇಳಿದನ್ನ ಕೇಳ್ತೀನಿ. ಅಧಿಕಾರಕ್ಕೆ ನಾನು ಅಂಟು ಕೂರಲ್ಲ ನಾನು ಎಂದರು.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಹಿಂದೂ ಕಾರ್ಯಕರ್ತರ ಹತ್ಯೆಗಳಿಗೆ ಕಾರಣರಾದ ದುಷ್ಕರ್ಮಿಗಳ ವಿರುದ್ಧ ನಮ್ಮ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ. ರಾಜ್ಯದಲ್ಲಿ ಪದೇ ಪದೇ ಹಿಂದೂ ಕಾರ್ಯಕರ್ತರ ಹತ್ಯೆಗಳು ನೆಡೆಯುತ್ತಿದ್ದು, ರಾಜ್ಯದ ಉದ್ದಗಲಕ್ಕೆ ಹಿಂದೂ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ.

ನಮ್ಮ ಸರ್ಕಾರ ಶ್ರೀ ಯೋಗಿ ಆದಿತ್ಯನಾಥ್ ಜಿ ಅವರ ಸರ್ಕಾರದ ಮಾದರಿಯಲ್ಲಿ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ನಮ್ಮ ಸರ್ಕಾರ ಹಾಗೂ ಸಂಘಟನೆಗೆ ವರ್ಚಸ್ಸು ಉಳಿಯಲು ಸಾಧ್ಯ. ನಮ್ಮ ಹಿಂದೂ ಕಾರ್ಯಕರ್ತರನ್ನು ರಕ್ಷಿಸಲು ನಮ್ಮಿಂದ ಸಾಧ್ಯವಾಗದಿದ್ದರೆ ನಾವು ಅಧಿಕಾರದಲ್ಲಿದ್ದೂ ಏನು ಪ್ರಯೋಜನ?.

ಪ್ರತಿ ಬಾರಿ ಹಿಂದೂ ಕಾರ್ಯಕರ್ತರ ಹತ್ಯೆಯಾದಾಗ ಭಾವಪೂರ್ಣ ಶ್ರದ್ಧಾಂಜಲಿ, ಕಠಿಣ ಕ್ರಮಕ್ಕೆ ಒತ್ತಾಯ, ದುಷ್ಕರ್ಮಿಗಳನ್ನು ಗಲ್ಲಿಗೇರಿಸಬೇಕು, ಓಂ ಶಾಂತಿ ಎನ್ನುವ ನಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್ ನಿಂದ ಏನೂ ಪ್ರಯೋಜನವಿಲ್ಲ. ಹಿಂದೂ ಕಾರ್ಯಕರ್ತರ ನಂಬಿಕೆ ಉಳಿಸಿಕೊಳ್ಳ ಬೇಕಾದರೆ ದುಷ್ಕರ್ಮಿಗಳನ್ನು ನಡು ರಸ್ತೆಯಲ್ಲಿಯೇ ಎನ್ಕೌಂಟರ್ ಮಾಡಬೇಕು.

ನನಗೆ ವೈಯಕ್ತಿಕವಾಗಿ ಅಧಿಕಾರಕ್ಕಿಂತ ನಮ್ಮ ಹಿಂದೂ ಕಾರ್ಯಕರ್ತರ ರಕ್ಷಣೆಯೇ ಮುಖ್ಯ, ಆದ್ದರಿಂದ ನಮ್ಮ ಸರ್ಕಾರ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ನನ್ನ ಮತ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಚರ್ಚಿಸಿ ಶಾಸಕ ಸ್ಥಾನಕ್ಕೆ “ರಾಜೀನಾಮೆ” ನೀಡಲು ಯೋಚಿಸುತ್ತಿದ್ದೇನೆ.

Vishwa News 24

Recent Posts

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು -vishwanews24

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…

2 hours ago

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…

4 hours ago

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

7 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

7 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

8 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

8 hours ago