Featured

ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ರಾಜೀನಾಮೆ ನೀಡುತ್ತೇನೆ : ರೇಣುಕಾಚಾರ್ಯ – Vishwanews24

ನಮ್ಮ ಹಿಂದೂ ಕಾರ್ಯಕರ್ತರನ್ನು ರಕ್ಷಿಸಲು ನಮ್ಮಿಂದ ಸಾಧ್ಯವಾಗದಿದ್ದರೆ ನಾವು ಅಧಿಕಾರದಲ್ಲಿದ್ದೂ ಏನು ಪ್ರಯೋಜನ?

ನನಗೆ ವೈಯಕ್ತಿಕವಾಗಿ ಅಧಿಕಾರಕ್ಕಿಂತ ನಮ್ಮ ಹಿಂದೂ ಕಾರ್ಯಕರ್ತರ ರಕ್ಷಣೆಯೇ ಮುಖ್ಯ..

ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ರಾಜೀನಾಮೆ ನೀಡುತ್ತೇನೆ

ಓಂ ಶಾಂತಿ ಎನ್ನುವ ನಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್ ನಿಂದ ಏನೂ ಪ್ರಯೋಜನವಿಲ್ಲ..

ಹಿಂದೂ ಕಾರ್ಯಕರ್ತರ ನಂಬಿಕೆ ಉಳಿಸಿಕೊಳ್ಳ ಬೇಕಾದರೆ ದುಷ್ಕರ್ಮಿಗಳನ್ನು ನಡು ರಸ್ತೆಯಲ್ಲಿಯೇ ಎನ್ಕೌಂಟರ್ ಮಾಡಬೇಕು..

ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೈದವರ ವಿರುದ್ಧ ನಿರ್ದಾಕ್ಷಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ನಾನು ಈ ಸರ್ಕಾರದಲ್ಲಿ ಮುಂದುವರಿಯುತ್ತೇನೆ, ಇಲ್ಲವಾದರೆ ರಾಜೀನಾಮೆ ನೀಡುತ್ತೇನೆ ಎಂದು ಸಾಸಕ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.

ಆರ್.ಟಿ.ನಗರದ ನಿವಾಸದಲ್ಲಿ ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಎಲ್ಲ ತ್ಯಾಗಕ್ಕೂ ಸಿದ್ಧ. ನಾನು ರಾಜೀನಾಮೆ ನೀಡಲು ಸಿದ್ಧ. ಕಾರ್ಯಕರ್ತರು ಏನ್ ಹೇಳ್ತಾರೆ ಅದನ್ನ ಕೇಳ್ತೀನಿ. ಕ್ಷೇತ್ರಕ್ಕೆ ನಾಳೆ ಹೋಗ್ತೀನಿ, ಕಾರ್ಯಕರ್ತರ ಹೇಳಿದನ್ನ ಕೇಳ್ತೀನಿ. ಅಧಿಕಾರಕ್ಕೆ ನಾನು ಅಂಟು ಕೂರಲ್ಲ ನಾನು ಎಂದರು.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಹಿಂದೂ ಕಾರ್ಯಕರ್ತರ ಹತ್ಯೆಗಳಿಗೆ ಕಾರಣರಾದ ದುಷ್ಕರ್ಮಿಗಳ ವಿರುದ್ಧ ನಮ್ಮ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ. ರಾಜ್ಯದಲ್ಲಿ ಪದೇ ಪದೇ ಹಿಂದೂ ಕಾರ್ಯಕರ್ತರ ಹತ್ಯೆಗಳು ನೆಡೆಯುತ್ತಿದ್ದು, ರಾಜ್ಯದ ಉದ್ದಗಲಕ್ಕೆ ಹಿಂದೂ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ.

ನಮ್ಮ ಸರ್ಕಾರ ಶ್ರೀ ಯೋಗಿ ಆದಿತ್ಯನಾಥ್ ಜಿ ಅವರ ಸರ್ಕಾರದ ಮಾದರಿಯಲ್ಲಿ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ನಮ್ಮ ಸರ್ಕಾರ ಹಾಗೂ ಸಂಘಟನೆಗೆ ವರ್ಚಸ್ಸು ಉಳಿಯಲು ಸಾಧ್ಯ. ನಮ್ಮ ಹಿಂದೂ ಕಾರ್ಯಕರ್ತರನ್ನು ರಕ್ಷಿಸಲು ನಮ್ಮಿಂದ ಸಾಧ್ಯವಾಗದಿದ್ದರೆ ನಾವು ಅಧಿಕಾರದಲ್ಲಿದ್ದೂ ಏನು ಪ್ರಯೋಜನ?.

ಪ್ರತಿ ಬಾರಿ ಹಿಂದೂ ಕಾರ್ಯಕರ್ತರ ಹತ್ಯೆಯಾದಾಗ ಭಾವಪೂರ್ಣ ಶ್ರದ್ಧಾಂಜಲಿ, ಕಠಿಣ ಕ್ರಮಕ್ಕೆ ಒತ್ತಾಯ, ದುಷ್ಕರ್ಮಿಗಳನ್ನು ಗಲ್ಲಿಗೇರಿಸಬೇಕು, ಓಂ ಶಾಂತಿ ಎನ್ನುವ ನಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್ ನಿಂದ ಏನೂ ಪ್ರಯೋಜನವಿಲ್ಲ. ಹಿಂದೂ ಕಾರ್ಯಕರ್ತರ ನಂಬಿಕೆ ಉಳಿಸಿಕೊಳ್ಳ ಬೇಕಾದರೆ ದುಷ್ಕರ್ಮಿಗಳನ್ನು ನಡು ರಸ್ತೆಯಲ್ಲಿಯೇ ಎನ್ಕೌಂಟರ್ ಮಾಡಬೇಕು.

ನನಗೆ ವೈಯಕ್ತಿಕವಾಗಿ ಅಧಿಕಾರಕ್ಕಿಂತ ನಮ್ಮ ಹಿಂದೂ ಕಾರ್ಯಕರ್ತರ ರಕ್ಷಣೆಯೇ ಮುಖ್ಯ, ಆದ್ದರಿಂದ ನಮ್ಮ ಸರ್ಕಾರ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ನನ್ನ ಮತ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಚರ್ಚಿಸಿ ಶಾಸಕ ಸ್ಥಾನಕ್ಕೆ “ರಾಜೀನಾಮೆ” ನೀಡಲು ಯೋಚಿಸುತ್ತಿದ್ದೇನೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

50 minutes ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

54 minutes ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

1 hour ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

2 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago