Featured

ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರುವುದಿಲ್ಲ , ಕನ್ನಡಿಗರ ಶಕ್ತಿ ಏನೆಂದು ತೋರಿಸುವ ಕಾಲ ಈಗ ಬಂದಿದೆ : ಕುಮಾರಸ್ವಾಮಿ – Vishwanews24

ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರುವುದಿಲ್ಲ , ಕನ್ನಡಿಗರ ಶಕ್ತಿ ಏನೆಂದು ತೋರಿಸುವ ಕಾಲ ಈಗ ಬಂದಿದೆ : ಕುಮಾರಸ್ವಾಮಿ – Vishwanews24

ಬೆಂಗಳೂರು: ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರುವುದಿಲ್ಲ. ಕನ್ನಡಿಗರ ಶಕ್ತಿ ಏನೆಂದು ತೋರಿಸುವ ಕಾಲ ಈಗ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ತಡರಾತ್ರಿ ಪುಂಡರು ನಡೆಸಿರುವ ದಾಂಧಲೆಯನ್ನು ಕಟು ಶಬ್ದಗಳಲ್ಲಿ ಖಂಡಿಸಿರುವ ಅವರು, ಬೆಳಗಾವಿಯಲ್ಲಿ ನಡೆಯುತ್ತಿರುವ ಇಂಥ ಭಯೋತ್ಪಾದನೆಯನ್ನು ಕೊನೆಗಾಣಿಸಬೇಕಾಗಿದೆ ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಘಟನೆ ಕುರಿತಂತೆ ಟ್ವೀಟ್ ಮೂಲಕ ಮಾಡಿರುವ ಕುಮಾರಸ್ವಾಮಿ ಅವರು, ಪುಂಡರ ಹೆಡೆಮುರಿ ಕಟ್ಟಿ ತಕ್ಕ ಶಾಸ್ತಿ ಮಾಡಬೇಕು. ಮತ್ತೆ ಇಂಥ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಬೆಳಗಾವಿಯಲ್ಲಿ ತಡರಾತ್ರಿ ಪುಂಡರು ಪೊಲೀಸ್ ವಾಹನಗಳಿಗೆ ಹಾನಿ ಮಾಡಿ ಬೆಂಕಿ ಹಚ್ಚಿರುವುದು ಅಕ್ಷಮ್ಯ. ವಿಧಾನಮಂಡಲ ಅಧಿವೇಶನಕ್ಕೆ ಹೋಗಲು ಪಾಸ್ ಅಂಟಿಸಲಾಗಿದ್ದ ವಾಹನಗಳನ್ನೇ ಗುರಿ ಮಾಡಲಾಗಿದೆ. ಕನ್ನಡಿಗರ ಹೆಮ್ಮೆಯಾದ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಹಾಳು ಮಾಡಿರುವುದು ಕ್ಷಮಾರ್ಹವಲ್ಲದ ಅಪರಾಧ. ಖಂಡನೀಯ ಎಂದಿದ್ದಾರೆ.

ಬೆಳಗಾವಿಯಲ್ಲಿ ಪ್ರಕ್ಷುಬ್ಧತೆ ಸೃಷ್ಟಿಸಿ ಭಾಷಾ ವೈಷಮ್ಯವನ್ನು ಹೆಚ್ಚಿಸುವುದು ದುರುಳರ ಉದ್ದೇಶವಿದ್ದಂತಿದೆ. ಶಾಂತಿಯನ್ನು ಕದಡಿ ಜನರಲ್ಲಿ ಭಯಭೀತಿ ಉಂಟು ಮಾಡಲು ಪುಂಡರನ್ನು ಪ್ರಚೋದಿಸಿದವರನ್ನು ಹೊರಗೆಳೆದು ಶಿಕ್ಷಿಸಬೇಕು. ಈ ಪುಂಡಾಟದ ಹಿಂದೆ ದೊಡ್ಡ ಹುನ್ನಾರ ಇರುವಂತಿದೆ ಎಂದು ಕಿಡಿಕಾರಿದ್ದಾರೆ.

ಸರ್ಕಾರಿ ಕಾರುಗಳನ್ನು ಗುರಿ ಮಾಡಿರುವುದು ರಾಜ್ಯ ಸರ್ಕಾರವನ್ನೇ ಗುರಿ ಮಾಡಿದಂತೆ. ಸಂಗೊಳ್ಳಿ ರಾಯಣ್ಣ ಪ್ರತಿಮೆ ಮೇಲೆ ದಾಳಿ ಮಾಡಿರುವುದು ಕನ್ನಡಿಗರ ಮೇಲೆ, ಕರ್ನಾಟಕದ ಮೇಲೆ ದಾಳಿಗೆ ಸಮ. ಸರ್ಕಾರ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಕೂಡಲೇ ಆ ದುರುಳರಿಗೆ ಕನ್ನಡಿಗರ ಶಕ್ತಿ ಏನೆಂಬುದನ್ನು ತೋರಿಸಬೇಕು. ಬೆಳಗಾವಿಯಲ್ಲಿ ಭಯೋತ್ಪಾದನೆ ಸೃಷ್ಟಿಸುತ್ತಿರುವ ಈ ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರುವುದಿಲ್ಲ. ಕನ್ನಡಿಗರ ಶಕ್ತಿ ಏನೆಂದು ತೋರಿಸುವ ಕಾಲ ಈಗ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

12 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

12 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

13 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

13 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

13 hours ago